ವಿಧಾನ ಪರಿಷತ್ ಚುನಾವಣೆ: ಜಗದೀಶ್ ಶೆಟ್ಟರ್ ಸೇರಿ ಕಾಂಗ್ರೆಸ್ ನ ಮೂವರೂ ಅವಿರೋಧ ಆಯ್ಕೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ...
ಜಗದೀಶ್ ಶೆಟ್ಟರ್ - ಸಚಿವ ಬೋಸರಾಜು - ತಿಪ್ಪಣ್ಣ ಕಮಕನೂರು
ಜಗದೀಶ್ ಶೆಟ್ಟರ್ - ಸಚಿವ ಬೋಸರಾಜು - ತಿಪ್ಪಣ್ಣ ಕಮಕನೂರು
Updated on

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ ಕಮಕನೂರು ಹಾಗೂ ಸಚಿವ ಬೋಸರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ.

ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಈ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿತ್ತು.

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಬೇಕಿದ್ದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿತ್ತು ಮತ್ತು ನಾಮಪತ್ರ ವಾಪಸ್ ಪಡೆಯಲು ಇಂದು(ಜೂನ್ 23) ಕೊನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಈ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com