ಜೆಡಿಎಸ್ ಸೇರುವುದಕ್ಕೂ ಮುನ್ನವೇ ಸ್ವಗ್ರಾಮದಿಂದ ಎ ಮಂಜು ಪ್ರಚಾರ ಆರಂಭ

ಮಾಜಿ ಸಚಿವ ಎ ಮಂಜು ಜೆಡಿಎಸ್ ಟಿಕೆಟ್ ಮೇಲೆ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಜೆಡಿಎಸ್ ಸೇರುವುದಕ್ಕೂ ಮುನ್ನ ಹನ್ಯಾಲು ಗ್ರಾಮದಿಂದ ಪ್ರಚಾರ ಆರಂಭಿಸಿದ್ದಾರೆ. 
ಎ ಮಂಜು
ಎ ಮಂಜು
Updated on

ಹಾಸನ: ಮಾಜಿ ಸಚಿವ ಎ ಮಂಜು ಜೆಡಿಎಸ್ ಟಿಕೆಟ್ ಮೇಲೆ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸಿದ್ದು, ಜೆಡಿಎಸ್ ಸೇರುವುದಕ್ಕೂ ಮುನ್ನ ಹನ್ಯಾಲು ಗ್ರಾಮದಿಂದ ಪ್ರಚಾರ ಆರಂಭಿಸಿದ್ದಾರೆ. 

ಪ್ರಚಾರಕ್ಕೂ ಮುನ್ನ ಅನುಯಾಯಿಗಳು, ಹಿರಿಯ ನಾಗರಿಕರು, ಗ್ರಾಮಸ್ಥರೊಂದಿಗೆ ಎ ಮಂಜು ಸಭೆ ನಡೆಸಿದ್ದು, ಈ ಸಭೆಯಲ್ಲಿ ಭಾಗಿಯಾಗಿದ್ದವರು ಮಾಜಿ ಸಚಿವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ. 

ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಎ ಮಂಜು, 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮರೆತು ಪಕ್ಷವನ್ನು ಬಲಪಡಿಸುವಂತೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ರೇವಣ್ಣ, ಎ ಮಂಜುಗೆ ಕರೆ ನೀಡಿದ್ದು ಮಂಜು ಜೆಡಿಎಸ್ ನಾಯಕ ಹೆಚ್ ಡಿ ದೇವೇಗೌಡ ಅವರ ಆಶೀರ್ವಾದ ಪಡೆದಿದ್ದಾರೆ.

ಇದನ್ನೂ ಓದಿ: ನಾನು ಅರಕಲಗೂಡು ಕ್ಷೇತ್ರದ ಜೆಡಿಎಸ್ ಅಧಿಕೃತ ಅಭ್ಯರ್ಥಿ: ಎ.ಮಂಜು
 
ತವರು ಜಿಲ್ಲೆಯಲ್ಲಿ ಪಕ್ಷದ ಸ್ಥಾನಗಳನ್ನು ಉಳಿಸಿಕೊಳ್ಳುವುದಕ್ಕೆ ಹೆಚ್ ಡಿ ರೇವಣ್ಣ, ಕುಮಾರಸ್ವಾಮಿ, ಎ ಮಂಜು ಕಾರ್ಯತಂತ್ರಗಳನ್ನು ಚರ್ಚಿಸಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ನಿರ್ದೇಶನದ ನಂತರ ಎ ಮಂಜು ಪ್ರಚಾರ ಆರಂಭಿಸಿದ್ದು, ಜೆಡಿಎಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. 

ಮಂಜು ಬೇಷರತ್ತಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅರಕಲಗೂಡಿನಲ್ಲಿ ಬೃಹತ್ ಸಮಾವೇಶ ನಡೆಸುವ ಯೋಜನೆ ಹೊಂದಿದ್ದಾರೆ, ಹಾಗೂ ಈ ಸಮಾವೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಹಲವು ಕಾರ್ಯಕರ್ತರು ಜೆಡಿಎಸ್ ಸೇರುವ ಸಾಧ್ಯತೆ ಇದೆ ಮಾ.12 ರಂದು ದೇವೇಗೌಡರ ನಿವಾಸದಲ್ಲಿ ಎ ಮಂಜು ಜೆಡಿಎಸ್ ಸೇರ್ಪಡೆಯಾಗಲಿದ್ದು, ಮಾ.16 ರಂದು ಅರಕಲಗೂಡು ತಲುಪುವ ಪಾದಯಾತ್ರೆಯನ್ನು ಮುನ್ನಡೆಸಲಿದ್ದಾರೆ. 15 ದಿನಗಳ ಹಿಂದೆ ಕುಮಾರಸ್ವಾಮಿ ಅರಕಲಗೂಡು ಕ್ಷೇತ್ರದ ಜೆಡಿಎಸ್ ಟಿಕೆಟ್ ನ್ನು ಎ ಮಂಜು ಅವರಿಗೆ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com