ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಗೆಲ್ಲುವುದೊಂದೇ ನಮಗೆ ಮಾನದಂಡ, ಗೆಲ್ಲೋದಾದ್ರೆ ಎಂಎಲ್ಸಿಗಳನ್ನು ಅಭ್ಯರ್ಥಿ ಮಾಡಿದರೆ ತಪ್ಪಿಲ್ಲ: ಡಿ ಕೆ ಶಿವಕುಮಾರ್

ಈ ಬಾರಿಯ ವಿಧಾನಸಭೆ ಚುನಾವಣೆಗೆ ಗೆಲ್ಲುವ ಮಾನದಂಡಗಳನ್ನು ನೋಡಿಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಬೇರೆ ಯಾವುದೇ ವಿಚಾರವನ್ನು ಪರಿಗಣಿಸುವುದಿಲ್ಲ. ಗೆಲ್ಲುವ ಶಕ್ತಿ ಇದ್ದರೆ ವಿಧಾನ ಪರಿಷತ್ ಸದಸ್ಯರನ್ನು ಕೂಡ ಅಭ್ಯರ್ಥಿ ಸ್ಥಾನಕ್ಕೆ ಪರಿಗಣಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
Published on

ನವದೆಹಲಿ:ಈ ಬಾರಿಯ ವಿಧಾನಸಭೆ ಚುನಾವಣೆಗೆ ಗೆಲ್ಲುವ ಮಾನದಂಡಗಳನ್ನು ನೋಡಿಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಬೇರೆ ಯಾವುದೇ ವಿಚಾರವನ್ನು ಪರಿಗಣಿಸುವುದಿಲ್ಲ. ಗೆಲ್ಲುವ ಶಕ್ತಿ ಇದ್ದರೆ ವಿಧಾನ ಪರಿಷತ್ ಸದಸ್ಯರನ್ನು ಕೂಡ ಅಭ್ಯರ್ಥಿ ಸ್ಥಾನಕ್ಕೆ ಪರಿಗಣಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೂರು ವರ್ಷದಿಂದ ಪಕ್ಷ ಕಟ್ಟಿದ್ದೇವೆ, ಯಾರ್ಯಾರು ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ ಎಂದು ಗೊತ್ತಿದೆ ನಮಗೆ, ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೊದಲು 8ರಿಂದ 10 ಬಾರಿ ಸರ್ವೆ ಮಾಡಿಸಿದ್ದೇವೆ, ಇಂದು ಸಂಜೆ ವೇಳೆಗೆ ತೀರ್ಮಾನವಾಗುತ್ತದೆ ಎಂದರು.

ನಾನು ಪೂಜಾರಿಯಷ್ಟೆ, ದೇವರಿಗೆ ಒಪ್ಪಿಸುವುದಷ್ಟೇ ನನ್ನ ಕೆಲಸ, ಯುವಕರಿಗೆ ಅವಕಾಶವಿರುವ ಕಡೆ ಟಿಕೆಟ್ ನೀಡುತ್ತೇವೆ. ಎಲ್ಲರಿಗೂ ಟಿಕೆಟ್ ನೀಡಿ ಸಮಾಧಾನಪಡಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ಪಕ್ಷಕ್ಕಾಗಿ ನಾವು ತ್ಯಾಗ ಮಾಡಲು ಸಿದ್ಧರಿರಬೇಕಾಗುತ್ತದೆ. ಧರ್ಮಸಿಂಗ್, ಸಿದ್ದರಾಮಯ್ಯ ಸರ್ಕಾರದಲ್ಲಿ ನಾನು ಮಂತ್ರಿ ಆಗಿದ್ನಾ ಎಂದು ಡಿ ಕೆ ಶಿವಕುಮಾರ್ ಕೇಳಿದ್ದಾರೆ.

ಎಐಸಿಸಿ ಅಧ್ಯಕ್ಷರು ಕರ್ನಾಟಕದವರೇ, ನಮಗೆ ಗೆಲುವೊಂದೇ ಮಾನದಂಡ. ಗೆಲ್ಲುವ ಅವಕಾಶ ನೋಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ, ಗೆಲ್ಲೋದಾದ್ರೆ ಎಂಎಲ್ಸಿಗಳನ್ನು ಅಭ್ಯರ್ಥಿ ಮಾಡಿದರೆ ತಪ್ಪಿಲ್ಲ. ನಮ್ಮ ಪಕ್ಷದಲ್ಲಿ ಫಾದರ್ ಅಂಡ್ ಸನ್ಸ್ ಬೇಕಾದಷ್ಟಿದ್ದಾರೆ. ಯುವಕರಿಗೆ, ಹೆಣ್ಣುಮಕ್ಕಳಿಗೆ ಸಹ ಪ್ರಾಧಾನ್ಯತೆ ನೀಡಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com