ವಿಧಾನಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ  ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ.
ಆಮ್ ಆದ್ಮಿ ಪಾರ್ಟಿ
ಆಮ್ ಆದ್ಮಿ ಪಾರ್ಟಿ
Updated on

ಬೆಂಗಳೂರು: ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ  ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಪಂಜಾಬ್‌ನಲ್ಲಿ ಅಧಿಕಾರ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ (Aam Aadmi Party), ಇದೀಗ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಬ್ರಿಜೇಶ್ ಕಾಳಪ್ಪ ಸೇರಿದಂತೆ ಹಲವರ ಸಮ್ಮುಖದಲ್ಲಿ ಪಟ್ಟಿ ಬಿಡುಗಡೆ ಮಾಡಿದೆ. 

ಮೊದಲ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಇಂದು ನಾವು ಬಿಡುಗಡೆ ಮಾಡುತ್ತಿರುವ ಮೊದಲ ಲಿಸ್ಟ್ ಜೊತೆಗೆ ಬೆಸ್ಟ್ ಲಿಸ್ಟ್. ಭ್ರಷ್ಟಾಚಾರ ರಹಿತ ಜನ ಸಾಮಾನ್ಯರಿಗೆ ನಮ್ಮ ಪಕ್ಷ  ಟಿಕೆಟ್ ನೀಡುತ್ತಿದೆ. 10 ವರ್ಷದಲ್ಲಿ ನಮ್ಮ ಪಕ್ಷ ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ. ಕಡಿಮೆ ಸಮಯದಲ್ಲಿ ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com