ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ: ಬಾಬುರಾವ್ ಚಿಂಚನಸೂರ್

ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಾಬುರಾವ್ ಚಿಂಚನಸೂರು
ಬಾಬುರಾವ್ ಚಿಂಚನಸೂರು
Updated on

ಕಲಬುರಗಿ: ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಗುರುವಾರ ಕಲಬುರಗಿಯ ಕಾಂಗ್ರೆಸ್ ಕಚೇರಿಗೆ ಮೊದಲ ಭೇಟಿ ನೀಡಿದ ಅವರು, ಕಲ್ಯಾಣ ಕರ್ನಾಟಕದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಆಧಾರ ಸ್ತಂಭವಾಗಿದ್ದು, ಅವರನ್ನು ಮಣಿಸಲು ಯಾರಿಂದಲೂ ಸಾಧ್ಯವಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ ಅವರು ಘೋಷಿಸಿದರು.

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೆ ಎಸ್ಟಿ ವರ್ಗಕ್ಕೆ ಸೇರಿಸುವುದಾಗಿ ಭರವಸೆ ನೀಡಿ ತನಗೆ ಮಾತ್ರವಲ್ಲದೆ ಕೋಲಿ ಕಬ್ಬಲಿಗ ಸಮುದಾಯಕ್ಕೂ ಮೋಸ ಮಾಡಿದೆ ಎಂದು ಕಿಡಿಕಾರಿದರು. ತಮ್ಮ ಸಮುದಾಯದ ಹಿತಾಸಕ್ತಿಯಿಂದ ಕೇಸರಿ ಪಕ್ಷಕ್ಕೆ ಸೇರಿದೆ, ಲೋಕಸಭೆ ಚುನಾವಣೆ ಮತ್ತು ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರೂ ಬಿಜೆಪಿ ತನ್ನ ಭರವಸೆಯನ್ನು ಈಡೇರಿಸಲಿಲ್ಲ ಎಂದು ಆರೋಪಿಸಿದ್ದಾರೆ.

ಚಿಂಚನಸೂರ್ ಅವರು ಯಾವುದೇ ಸಮಯದಲ್ಲಿ ಯಾವುದೇ ಹುದ್ದೆಗಳಿಗೆ ಲಾಬಿ ಮಾಡಿಲ್ಲ, ಮತ್ತು ಅವರ ಪತ್ನಿ ಏನನ್ನೂ ನಿರೀಕ್ಷಿಸದೆ ಸಮಾಜ ಸೇವೆ ಮಾಡುತ್ತಿದ್ದಾರೆ. ಇನ್ನು, ಗುರ್ಮಿಟ್ಕಲ್ ವಿಧಾನಸಭಾ ಟಿಕೆಟ್ ನೀಡುವಂತೆ ಕಾಂಗ್ರೆಸ್ ಮುಖಂಡರ ಮುಂದೆ ಮನವಿ ಮಾಡಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ್ ಗುತ್ತೇದಾರ, ಮಾಜಿ ಎಂಎಲ್ ಸಿ ಅಲ್ಲಮಪ್ರಭು ಪಾಟೀಲ ಉಪಸ್ಥಿತರಿದ್ದರು.

2019 ರಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಡಾ ಉಮೇಶ್ ಜಾಧವ್ ಅವರನ್ನು ಗೆಲ್ಲಿಸಲು ಮಾಜಿ ಸಚಿವ ಮಲ್ಲಿಕಯ್ಯ ಗುತ್ತೇದಾರ್ ಅವರೊಂದಿಗೆ ಕೈಜೋಡಿಸಿ 2019 ರಲ್ಲಿ ಬಿಜೆಪಿ ಸೇರಿದರು. ಖರ್ಗೆ ಸೋತರು, ಚಿಂಚನಸೂರ್ ಮತ್ತು ಇಬ್ಬರೂ ಗುತ್ತೇದಾರ್ ಅವರು ತಮ್ಮ ಪ್ರಚಾರದಿಂದ ಖರ್ಗೆ ಸೋತರು ಎಂದು ಪದೇ ಪದೇ ಹೇಳಿಕೊಂಡಿದ್ದರು.

ಮಲ್ಲಿಕಾಂರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶವೇ ಗುರುತಿಸುವ ಮಟ್ಟಿಗೆ ಬೆಳೆದಿದ್ದಾರೆ. ಅವರ ಅಧ್ಯಕ್ಷತೆ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ. ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡಿಸಿದ್ದು ಶಿವಕುಮಾರ್ ಅವರು. ಅವರ ಸಹಾಯವನ್ನು ನಾನು ಏಳೇಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ.

ಹೈದರಾಬಾದ್ ಕರ್ನಾಟಕ ಖರ್ಗೆ ಅವರ ಭದ್ರಕೋಟೆ, ಅದನ್ನು ಛಿದ್ರ ಮಾಡಬೇಕು ಎಂದು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಖರ್ಗೆ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಹೈದರಾಬಾದ್ ಕರ್ನಾಟಕದಲ್ಲಿ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ 25 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಂಡ ಗೆಲವು ಸಾಧಿಸಲಿದೆ. 2023ರಲ್ಲಿ ಬಾಬುರಾವ್ ಚಿಂಚನಸೂರು ಸಾಮರ್ಥ್ಯ ಏನು ಎಂದು ತೋರಿಸುತ್ತೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com