ಮೀಸಲಾತಿ ಬದಲಾವಣೆ ಚುನಾವಣಾ ಗಿಮಿಕ್: ಸಿದ್ದರಾಮಯ್ಯ

ಮೀಸಲಾತಿ ಬದಲಾವಣೆಯಿಂದ ಯಾರಿಗೂ ಪ್ರಯೋಜನವಾಗದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಪ್ರಯತ್ನಗಳ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಮೀಸಲಾತಿ ಬದಲಾವಣೆಯಿಂದ ಯಾರಿಗೂ ಪ್ರಯೋಜನವಾಗದು, ವಿಧಾನಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಪ್ರಯತ್ನಗಳ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಚುನಾವಣಾ ಗಿಮಿಕ್‌’ ಅಷ್ಟೇ. “ಸರ್ಕಾರವು ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿದೆ. ಅದನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ವಿತರಿಸಿದೆ. ಒಂದು ಸಮುದಾಯದಿಂದ ಇನ್ನೊಂದು ಸಮುದಾಯಕ್ಕೆ ಕೊಡಲು ಮೀಸಲಾತಿಯನ್ನು ಕಸಿದುಕೊಳ್ಳಲಾಗಿದೆ. ಬಿಜೆಪಿಯವರು ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಆರ್ಥಿಕವಾಗಿ ದುರ್ಬಲ ವರ್ಗದ ಕೋಟಾದಡಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆದರೆ, ಅದು ಸುಲಭವಲ್ಲ ತಿಳಿಸಿದರು. ಎಸ್‌ಸಿಗಳಿಗೆ ಒಳಮೀಸಲಾತಿ ವಿಚಾರ ಸುದೀರ್ಘ ಪ್ರಕ್ರಿಯೆಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com