ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ: ಕಾಂಗ್ರೆಸ್ ಸೇರಲು ಸಜ್ಜು

ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಸಚಿವ ಹಾಗೂ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ ನೀಡಿದ್ದಾರೆ. ನಾನು ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಶ್ರೀನಿವಾಸ್ ತಿಳಿಸಿದ್ದಾರೆ.
ವಿಧಾನಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಎಸ್ ಆರ್ ಶ್ರೀನಿವಾಸ್
ವಿಧಾನಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಎಸ್ ಆರ್ ಶ್ರೀನಿವಾಸ್
Updated on

ಗುಬ್ಬಿ: ತುಮಕೂರಿನ ಗುಬ್ಬಿ ಕ್ಷೇತ್ರದ ಮಾಜಿ ಸಚಿವ ಹಾಗೂ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್ ಆರ್ ಶ್ರೀನಿವಾಸ್ ರಾಜೀನಾಮೆ ನೀಡಿದ್ದಾರೆ. ನಾನು ಸ್ವಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ಶ್ರೀನಿವಾಸ್ ತಿಳಿಸಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಶಾಸಕ ಸ್ಥಾನಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇಂದೇ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ. 

ಈ ಬಗ್ಗೆ ಗುಬ್ಬಿಯಲ್ಲಿ ಮಾತನಾಡಿರುವ ಶ್ರೀನಿವಾಸ್ , ಇಂದು ಬೆಂಗಳೂರಿಗೆ ತೆರಳಿ ಸ್ಪೀಕರ್‌ಗೆ ರಾಜಿನಾಮ ಪತ್ರವನ್ನು ಸಲ್ಲಿಸಲಿಸುತ್ತೇನೆ.  ಕಾಂಗ್ರೆಸ್‌ನಿಂದ ಟಿಕೆಟ್​ ಸಿಗುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದಿಂದಲೇ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com