ಎ.ಟಿ ರಾಮಸ್ವಾಮಿ
ಎ.ಟಿ ರಾಮಸ್ವಾಮಿ

ಜೆಡಿಎಸ್ ಮತ್ತೊಂದು ವಿಕೆಟ್ ಪತನ: ಅರಕಲಗೂಡು ಶಾಸಕ ಎ.ಟಿ ರಾಮಸ್ವಾಮಿ ರಾಜಿನಾಮೆ

ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.
Published on

ಹಾಸನ: ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.

ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರನ್ನು ಭೇಟಿಮಾಡಿ ರಾಜೀನಾಮೆ ಪತ್ರ ಸಲ್ಲಿಸಿದರು. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ರಾಮಸ್ವಾಮಿ, ಈಗ ಪಕ್ಷ ತೊರೆಯಲು ಮುಂದಾಗಿದ್ದಾರೆ. ಈ ಕಾರಣದಿಂದ ರಾಜೀನಾಮೆ ನೀಡಿದ್ದಾರೆ.

ಬಳಿಕ ಮಾತನಾಡಿದ ಅವರು 'ನಾನು ಶಾಸಕ ಸ್ಥಾನಕ್ಕೆ ಸಂತೋಷದಿಂದ ರಾಜಿನಾಮೆ ಸಲ್ಲಿಸಿದ್ದೇನೆ. ಇಷ್ಟು ದಿನ ಶಾಸಕನಾಗಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿಕೊಟ್ಟ ಜೆಡಿಎಸ್ ಗೆ ಧನ್ಯವಾದಗಳು. ಅತ್ಯಂತ ಪ್ರಾಮಾಣಿಕವಾಗಿ ಕೆಲಸವನ್ನು ಮಾಡಿರುವ ತೃಪ್ತಿ ನನಗಿದೆ' ಎಂದರು.

'ನಾನು ಯಾವುದೇ ವೈಯಕಿಕ ಹಿತಾಸಕ್ತಿಯಿಂದ ರಾಜಕೀಯ ಮಾಡಿಲ್ಲ. ಶಾಸಕನಾಗಿದ್ದಾಗ ಜನಪರ ಕೆಲಸ ಮಾಡಿದ್ದೇನೆ.  ಜೆಡಿಎಸ್ ಬಿಡುವುದಾಗಿ ನಾನೂ ಎಲ್ಲೂ ಹೇಳಿಲ್ಲ, ಆದರೆ, ಜೆಡಿಎಸ್ ಮುಖಂಡರೇ ನನ್ನನ್ನು ಪಕ್ಷದಿಂದ ಹೊರ ಹಾಕಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದೇ ನನಗೆ ಮುಳುವಾಯಿತು' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com