ಮತಗಟ್ಟೆಗೆ ತೆರಳುವ ಮುನ್ನ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಅಡುಗೆ ಎಣ್ಣೆ ಬೆಲೆ ಗಮನದಲ್ಲಿಟ್ಟುಕೊಳ್ಳಲು ಮನವಿ!

ಮತಗಟ್ಟೆಗೆ ತೆರಳುವ ಮೊದಲು ಗ್ಯಾಸ್ ಸಿಲಿಂಡರ್ ದರ, ಪೆಟ್ರೋಲ್ ಬೆಲೆ ಮತ್ತು ಅಡುಗೆ ಎಣ್ಣೆ ಬೆಲೆಗಳನ್ನು ಪರಿಶೀಲಿಸಬೇಕು ಎಂದು ನಾವು ನಮ್ಮ ಕಾರ್ಯಕರ್ತರಿಗೆ, ವಿಶೇಷವಾಗಿ ಮಹಿಳೆಯರಿಗೆ ಹೇಳಿದ್ದೇವೆ ಎಂದು ಚಂದ್ರಪ್ಪ ಹೇಳಿದರು.
ಕಾಂಗ್ರೆಸ್
ಕಾಂಗ್ರೆಸ್

ಬೆಂಗಳೂರು: ಮತದಾನಕ್ಕೆ ಕೇವಲ 48 ಗಂಟೆಗಳಷ್ಟೇ ಬಾಕಿ ಇರುವ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಎಂ.ಚಂದ್ರಪ್ಪ, ಕೋರಮಂಗಲ ಗ್ರಾಮದ ಯುವ ಮುಖಂಡರು, ತಳಮಟ್ಟದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರಿಗೆ ಬೆಂಬಲ ಸೂಚಿಸಿದರು.

ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ರಾಮಲಿಂಗಾರೆಡ್ಡಿ ಅವರು 30,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದನ್ನು ಖಚಿತಪಡಿಸಿಕೊಳ್ಳುವುದು ಸಭೆಯ ಕಾರ್ಯಸೂಚಿಯಾಗಿದೆ. 

ಒಂದೆಡೆ ಜಮಾಯಿಸಿದ ಸುಮಾರು 3,000 ಕಾಂಗ್ರೆಸ್ ಕಾರ್ಯಕರ್ತರು ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಸ್ಪರ್ಧಿಸುತ್ತಿರುವ ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರಗಳ ಮಹಿಳೆಯರನ್ನು ತಲುಪಲು ಮತ್ತು ಕಾಂಗ್ರೆಸ್ ಭರವಸೆಗಳ ಬಗ್ಗೆ ಪ್ರತಿ ಮನೆಗೆ ತೆರಳಿ ತಿಳಿಸಲು ಹೇಳಿದರು.

ಮತಗಟ್ಟೆಗೆ ತೆರಳುವ ಮೊದಲು ಗ್ಯಾಸ್ ಸಿಲಿಂಡರ್ ದರ, ಪೆಟ್ರೋಲ್ ಬೆಲೆ ಮತ್ತು ಅಡುಗೆ ಎಣ್ಣೆ ಬೆಲೆಗಳನ್ನು ಪರಿಶೀಲಿಸಬೇಕು ಎಂದು ನಾವು ನಮ್ಮ ಕಾರ್ಯಕರ್ತರಿಗೆ, ವಿಶೇಷವಾಗಿ ಮಹಿಳೆಯರಿಗೆ ಹೇಳಿದ್ದೇವೆ ಎಂದು ಚಂದ್ರಪ್ಪ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com