'ಯಡಿಯೂರಪ್ಪ ಮಗ' ಎಂಬ ಅರ್ಹತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಕಾಂಗ್ರೆಸ್

ರಾಜ್ಯದ ನೂತನ ಬಿಜೆಪಿ ಅಧ್ಯಕ್ಷರಾಗಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಕುರಿತು ಕಾಂಗ್ರೆಸ್ ಪ್ರತಿಕ್ರಿಯಿಸಿದೆ.
ಬಿ.ವೈ. ವಿಜಯೇಂದ್ರ, ಬಿಎಸ್ ವೈ
ಬಿ.ವೈ. ವಿಜಯೇಂದ್ರ, ಬಿಎಸ್ ವೈ
Updated on

ಬೆಂಗಳೂರು: ರಾಜ್ಯದ ನೂತನ ಬಿಜೆಪಿ ಅಧ್ಯಕ್ಷರಾಗಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರ ಕುರಿತು ಕಾಂಗ್ರೆಸ್ ಪ್ರತಿಕ್ರಿಯಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಕಾಂಗ್ರೆಸ್, "ಯಡಿಯೂರಪ್ಪ ಮಗ" ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ಟೀಕಿಸಿದೆ. ಅಲ್ಲದೇ, "ಯಡಿಯೂರಪ್ಪನವರ ಮಗ"ನಿಗೆ ಅಭಿನಂದನೆಗಳು ಎಂದು ಹೇಳಿದೆ. 

"ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ" ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುವುದಾಗಿ ಕಾಂಗ್ರೆಸ್ ತಿಳಿಸಿದೆ.

ವಿಧಾನಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಬಿದ್ದಿತ್ತು. ಈ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಮತ್ತಿತರ ಹೆಸರುಗಳು ಕೇಳಿಬರುತಿತ್ತು. ಇದೀಗ ಬಿಜೆಪಿ ಹೈಕಮಾಂಡ್ ಬಿಎಸ್ ಯಡಿಯೂರಪ್ಪ ಅವರಿಗೆ ಮಣೆ ಹಾಕುವ ಮೂಲಕ ವಿಜಯೇಂದ್ರ ಅವರನ್ನು ರಾಜ್ಯದ ನೂತನ ಸಾರಥಿಯನ್ನಾಗಿ ನೇಮಕ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com