'ಅಧಿಕಾರದಲ್ಲಿದ್ದಾಗ ಸಹಕಾರ ಖಾತೆಯನ್ನೇ ಕೊಟ್ಟಿತ್ತು; ಆಗ ಅಧಿಕಾರ ಅನುಭವಿಸಿ ಈಗ ಪಕ್ಷ ಸಂಘಟನೆ ಮಾಡುವುದಿಲ್ಲ ಎಂದರೆ ಹೇಗೆ?'

ಪಕ್ಷ ಅಧಿಕಾರದಲ್ಲಿ ಇದ್ದಾಗ ಅಧಿಕಾರ ಅನುಭವಿಸಿ ಇಲ್ಲದಿದ್ದಾಗ ಪಕ್ಷ ಸಂಘಟನೆ ಮಾಡುವುದಿಲ್ಲ ಎಂದರೆ ಹೇಗೆ, ಮೈಸೂರಿನಂತಹ ದೊಡ್ಡ ಜಿಲ್ಲೆಯ ಉಸ್ತುವಾರಿ ನೀಡಲಾಗಿತ್ತು. ನಾವೀಗ ರಾಜ್ಯದಲ್ಲಿ ಅಧಿಕಾರದಲ್ಲಿ ಇಲ್ಲ, ಸಮಸ್ಯೆಯಲ್ಲಿ ಇದ್ದೇವೆ
ಎಸ್,ಟಿ ಸೋಮಶೇಖರ್
ಎಸ್,ಟಿ ಸೋಮಶೇಖರ್

ಚಿಕ್ಕಮಗಳೂರು: ಪಕ್ಷ ಅಧಿಕಾರದಲ್ಲಿ ಇದ್ದಾಗ ಅಧಿಕಾರ ಅನುಭವಿಸಿ ಇಲ್ಲದಿದ್ದಾಗ ಪಕ್ಷ ಸಂಘಟನೆ ಮಾಡುವುದಿಲ್ಲ ಎಂದರೆ ಹೇಗೆ, ಮೈಸೂರಿನಂತಹ ದೊಡ್ಡ ಜಿಲ್ಲೆಯ ಉಸ್ತುವಾರಿ ನೀಡಲಾಗಿತ್ತು. ನಾವೀಗ ರಾಜ್ಯದಲ್ಲಿ ಅಧಿಕಾರದಲ್ಲಿ ಇಲ್ಲ, ಸಮಸ್ಯೆಯಲ್ಲಿ ಇದ್ದೇವೆ. ಈ ಸಂದರ್ಭದಲ್ಲಿ ಸೋಮಶೇಖರ್ ವಿಷ ಕುಡಿಯುವ ಸ್ಥಿತಿ ಬಂದಿದೆ ಎಂದು ಮಾತನಾಡಿದರೆ, ಪಕ್ಷ ಕಟ್ಟುವವರು ಯಾರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಶಾಸಕ ಎಸ್.ಟಿ. ಸೋಮಶೇಖರ್ ಅವರಿಗೆ ಬಿಜೆಪಿ ಏನು ಮೋಸ ಮಾಡಿದೆ. ಅಧಿಕಾರದಲ್ಲಿ ಇದ್ದಾಗ ಸಹಕಾರದಂತಹ ದೊಡ್ಡ ಖಾತೆಯನ್ನೇ ನೀಡಿರಲಿಲ್ಲವೆ’ ಎಂದು  ಮರು ಪ್ರಶ್ನಿಸಿದ್ದಾರೆ.

ಅಧಿಕಾರದಲ್ಲಿರುವ ಕಾಂಗ್ರೆಸ್ ಖುಷಿಪಡಿಸಲು ಈ ರೀತಿ ‌ಮಾತನಾಡುವುದು ತಪ್ಪಾಗುತ್ತದೆ. ಯಶವಂತಪುರದಲ್ಲಿ ಅವರ ನಾಯಕತ್ವದಲ್ಲೆ ಎಲ್ಲಾ ಕಾರ್ಯಕ್ರಮ ನಡೆಯುತ್ತಿವೆ. ಅವರನ್ನು ವಿರೋಧಿಸುವವರು ಪಕ್ಷದಲ್ಲಿ ಯಾರೂ ಇಲ್ಲ. ಅವರು ಈಗಲೂ ಪಕ್ಷದಲ್ಲೇ ಉಳಿದು ಸಂಘಟನೆ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಡಿ.ವಿ. ಸದಾನಂದಗೌಡರು ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ ಬಳಿಕ ನಾನು ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಎಂಬ ಊಹಾಪೋಹ ಶುರುವಾಗಿದೆ. ಪಕ್ಷದಲ್ಲಿ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ.‌ ಸದ್ಯ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ. ಮುಂದೆ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com