ಇಂದು ಬಿಜೆಪಿ ಶಾಸಕಾಂಗ ಸಭೆ: ಕೇಂದ್ರ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್, ದುಷ್ಯಂತ್ ಗೌತಮ್ ಭಾಗಿ

ಬೆಂಗಳೂರಿನಲ್ಲಿ ಇಂದು ಸಂಜೆ ಮಹತ್ವದ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. 
ಕೇಂದ್ರ ವೀಕ್ಷಕರಿಗೆ ಸ್ವಾಗತ ಕೋರಿದ ವಿಜಯೇಂದ್ರ
ಕೇಂದ್ರ ವೀಕ್ಷಕರಿಗೆ ಸ್ವಾಗತ ಕೋರಿದ ವಿಜಯೇಂದ್ರ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಸಂಜೆ ಮಹತ್ವದ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಮುಂದಾಗಿದೆ ಎನ್ನಲಾಗಿದೆ.

ಈ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ಕೇಂದ್ರ ವೀಕ್ಷಕರಾಗಿ ಭಾಗವಹಿಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಈ ನಾಯಕರಿಗೆ ಪಕ್ಷದ ಕೇಂದ್ರ ಕಚೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವಾಗತ ಕೋರಿದರು. 

ಶಾಸಕಾಂಗ ಪಕ್ಷದ ಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯ ಪಡೆದು ಹೆಸರು ಪ್ರಕಟಿಸುವ ಸಾಧ್ಯತೆಯಿದೆ. ಶಾಸಕರಾದ ಸುನೀಲ್ ಕುಮಾರ್ ವಿ, ಅಶ್ವತ್ಥ್ ನಾರಾಯಣ್ ಮತ್ತು ಆರಗ ಜ್ಞಾನೇಂದ್ರ ಅವರ ಜೊತೆಗೆ ಆರ್ ಅಶೋಕ್ ಅವರ ಹೆಸರು ಈ ಹುದ್ದೆಗೆ ಕೇಳಿಬರುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com