ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದು ರಾಯಚೂರು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಅವರು ಗರುವಾರ ಹೇಳಿದ್ದು, ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ.
ಇಂದು ನಗರದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ ಪಾಟೀಲ್ ಅವರು, ಈ ಹಿಂದೆ ದೇವರಾಜ ಅರಸು 8 ವರ್ಷ ಮುಖ್ಯಮಂತ್ರಿ ಆಗಿದ್ದರು. ನಿಮ್ಮೆಲ್ಲರ ಆರ್ಶೀವಾದಿಂದ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಹತ್ತು ವರ್ಷಗಳ ಕಾಲ ರಾಜ್ಯವಾಳಲಿ. ಅವರು ಮುಖ್ಯಮಂತ್ರಿಯಾಗಿರುವವರೆಗೆ ಕುರುಬ ಸಮಾಜಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.
Advertisement