19 ಜೆಡಿಎಸ್ ಶಾಸಕರ ಪೈಕಿ 11 ಮಂದಿ ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಸಿಎಂ ಇಬ್ರಾಹಿಂ

2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್  ಪಕ್ಷದ 19 ಶಾಸಕರ ಪೈಕಿ 11 ಶಾಸಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬುಧವಾರ ಹೇಳಿದ್ದಾರೆ. .
ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ

ಬೆಂಗಳೂರು: 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಏಕಪಕ್ಷೀಯ ನಿರ್ಧಾರದಿಂದ ಅಸಮಾಧಾನಗೊಂಡಿರುವ ಜೆಡಿಎಸ್  ಪಕ್ಷದ 19 ಶಾಸಕರ ಪೈಕಿ 11 ಶಾಸಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬುಧವಾರ ಹೇಳಿದ್ದಾರೆ. 

'ಆ ಶಾಸಕರು ನನ್ನೊಂದಿಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಮೇ 10 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಶೇ.20 ರಷ್ಟು ಮುಸ್ಲಿಮರು ಮತ ಹಾಕಿದ್ದಾರೆ, ಇಲ್ಲದಿದ್ದರೆ ಪಕ್ಷವು ಕೇವಲ ಎರಡು ಸ್ಥಾನಗಳನ್ನು ಗೆಲ್ಲುತ್ತಿತ್ತು,” ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

ರಾಷ್ಟ್ರಮಟ್ಟದಲ್ಲಿ ಮೈತ್ರಿ ಮಾಡಿಕೊಳ್ಳುವ ಶಕ್ತಿ ನಮಗಿಲ್ಲ. ಕೇರಳದಲ್ಲಿ ಪಕ್ಷದ ನಾಯಕತ್ವ ನಮ್ಮನ್ನು ಒಂಟಿಯಾಗಿ ಮಾಡಿತು. ಈ ಮೈತ್ರಿ ಕರ್ನಾಟಕಕ್ಕೆ ಮಾತ್ರ ಸೀಮಿತ. ಎಲ್ಲರೂ ಹೋದ ಮೇಲೆ, ನಮ್ಮ ಬಳಿ ಚಿಹ್ನೆ ಇರಲಿದೆಯೇ ಎಂದು ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದಲ್ಲೂ ಜೆಡಿಎಸ್ ಬಲಿಷ್ಠವಾಗಿರುವುದರಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಕೈಗೊಳ್ಳುವ ಮುನ್ನ ಎಲ್ಲ ರಾಜ್ಯಗಳ ಪಕ್ಷದ ನಾಯಕರನ್ನು ಕರೆಯಬೇಕಿತ್ತು. ತಮ್ಮ ಅಭಿಪ್ರಾಯ ಪಡೆಯಲು ರಾಷ್ಟ್ರೀಯ ಅಧ್ಯಕ್ಷ ಎಚ್‌ಡಿ ದೇವೇಗೌಡರು ಸಭೆ ಕರೆಯಬೇಕಿತ್ತು ಎಂದು ಅಭಿಪ್ರಾಯಪಟ್ಟರು. 

ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಮುಸ್ಲಿಮರು ನೀಡಿದ ಕೊಡುಗೆಯನ್ನು ಪಕ್ಷದ ಹಿರಿಯ ನಾಯಕರು ಹಗುರವಾಗಿ ಪರಿಗಣಿಸಿದ್ದಾರೆ. ಕುಮಾರಸ್ವಾಮಿ ಅವರ ನಿರ್ಧಾರಗಳೊಂದಿಗೆ ಚುನಾವಣೆಗೆ ಹೋಗಿದ್ದರೆ ಪಕ್ಷ 19 ಸ್ಥಾನಗಳನ್ನು ಗೆಲ್ಲುತ್ತಿರಲಿಲ್ಲ. ನಾನು ಕುಮಾರಸ್ವಾಮಿ ಬಳಿ ಹೋಗಿಲ್ಲ, ಜೆಡಿಎಸ್ ಸೇರುವಂತೆ ಹಲವು ಬಾರಿ ನನ್ನ ಬಳಿ ಬಂದಿದ್ದರು. ಇನ್ನು ನಾಲ್ಕು ವರ್ಷ ಅಧಿಕಾರವಿದ್ದರೂ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ ಸೇರಿದ್ದೇನೆ ಎಂದು ವಿವರಿಸಿದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಹೋಗಿದ್ದರೆ ಜೆಡಿಎಸ್ ಎರಡರಿಂದ ಮೂರು ಸ್ಥಾನ ಗೆಲ್ಲುತ್ತಿತ್ತು ಎಂದು ಅವರು ಅಭಿಪ್ರಾಯಪಟ್ಟರು.

ಈ ವಿಷಯಗಳ ಕುರಿತು ಅಕ್ಟೋಬರ್ 16 ರಂದು ತಮ್ಮ ಬೆಂಬಲಿಗರ ಜೊತೆಗಿನ ಸಭೆಯಲ್ಲಿ ಚರ್ಚಿಸುತ್ತೇನೆ. ಜೆಡಿಎಸ್ ತೊರೆಯುವ ಬಗ್ಗೆ ನಿರ್ಧರಿಸುವ ಮೊದಲು  ದೇವೇಗೌಡರ ಮುಂದೆ  ನಿರ್ಧಾರಗಳನ್ನು ಮಂಡಿಸುವುದಾಗಿ ಹೇಳಿದರು.

ನೀವು ಕಾಂಗ್ರೆಸ್‌ಗೆ ಮರಳುತ್ತೀರಾ ಎಂಬ ಪ್ರಶ್ನೆಗೆ, “ನನಗೆ ಎನ್‌ಸಿಪಿ ನಾಯಕ ಶರದ್ ಪವಾರ್, ಜೆಡಿಯು ನಾಯಕ ನಿತೀಶ್ ಕುಮಾರ್, ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಹೈಕಮಾಂಡ್ ನಾಯಕರಿಂದ ಕರೆ ಬಂದಿದೆ. ಅಕ್ಟೋಬರ್ 16ರ ಸಭೆಯ ಫಲಿತಾಂಶದ ನಂತರ ನಾನು ನಿರ್ಧಾರ ತೆಗೆದುಕೊಳ್ಳುತ್ತೇನೆ ಮತ್ತು ದೇವೇಗೌಡರನ್ನು ಭೇಟಿ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com