ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ, ಹೈಕಮಾಂಡ್ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಸಚಿವ ರಾಜಣ್ಣ

ನಾನು ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ. ಹೈಕಮಾಂಡ್ ಹೇಳಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಸಚಿವ ಕೆ.ಎನ್ ರಾಜಣ್ಣ ಅವರು ಹೇಳಿದ್ದಾರೆ.
ಸಚಿವ ರಾಜಣ್ಣ
ಸಚಿವ ರಾಜಣ್ಣ

ಬೆಂಗಳೂರು: ನಾನು ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ. ಹೈಕಮಾಂಡ್ ಹೇಳಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಸಚಿವ ಕೆ.ಎನ್ ರಾಜಣ್ಣ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವೆ. ಯಾರು ಏನೇ ಹೇಳಿದರೂ ತೀರ್ಮಾನ ಮಾಡುವುದು ಹೈಕಮಾಂಡ್. ಸಂಪುಟ ಪುನಾರಚಮೆ ಬಗ್ಗೆ ತೀರ್ಮಾನ ಮಾಡುವವರು ಅವರೇ. ನಾನು ಕೂಡ ಹೈಕಮಾಂಡ್ ಹೇಳಿದಂತೆ ಮಾಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಡಿ.ಕೆ.ಶಿವಕುಮಾರ್​​ ಮತ್ತೆ ತಿಹಾರ್  ಜೈಲಿಗೆ ಹೋಗುತ್ತಾರೆ ಎಂಬ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ತಿರುಗೇಟು ನೀಡಿದ ಅವರು,  ಡಿಕೆ ಶಿವಕುಮಾರ್​​ ರನ್ನು ಜೈಲಿಗೆ ಹಾಕಿಸುವುದಕ್ಕೆ ಕುಮಾರಸ್ವಾಮಿ ನ್ಯಾಯಾಧೀಶರಲ್ಲ. ಒಂದು ವೇಳೆ ಅವರು ನ್ಯಾಯಾಧೀಶರಾಗಿದ್ದರೆ ಒಪ್ಪಿಕೊಳ್ಳೋಣ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com