ಇಂಧನ ಸಚಿವ ಕೆಜೆ ಜಾರ್ಜ್ ಕಾಣೆಯಾಗಿದ್ದಾರೆ: ಬಿಜೆಪಿ, ಕಾಂಗ್ರೆಸ್ ಫೋಸ್ಟರ್ ವಾರ್!

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕೊರತೆ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವಣ ಸಾಮಾಜಿಕ ಜಾಲತಾಣಗಳಲ್ಲಿ  ಫೋಸ್ಟರ್ ವಾರ್ ನಡೆಯುತ್ತಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್
ಇಂಧನ ಸಚಿವ ಕೆ.ಜೆ. ಜಾರ್ಜ್
Updated on

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕೊರತೆ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವಣ ಸಾಮಾಜಿಕ ಜಾಲತಾಣಗಳಲ್ಲಿ  ಫೋಸ್ಟರ್ ವಾರ್ ತೀವ್ರಗೊಂಡಿದೆ.

''ರಾಜ್ಯವನ್ನು ಕತ್ತಲೆಗೆ  ದೂಡಿ ಕಾಣೆಯಾಗಿದ್ದಾರೆ'' ಎಂಬ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರ ಭಾವಚಿತ್ರವುಳ್ಳ ಫೋಸ್ಟರ್  ರಾಜ್ಯ ಬಿಜೆಪಿ ಘಟಕ ಎಕ್ಸ್ ನಲ್ಲಿ ಬಿಡುಗಡೆ ಮಾಡಿದೆ. ಇಂಧನ ಸಚಿವರನ್ನು ಹುಡುಕಿ ಕೊಟ್ಟವರಿಗೆ ಕನಿಷ್ಠ ಸಿಂಗಲ್ ಫೇಸ್ ವಿದ್ಯುತ್ ಉಚಿತ, ಖಚಿತ, ನಿಶ್ಚಿತ ಎಂದು ಲೇವಡಿ ಮಾಡಿದೆ.

ಈ ಫೋಸ್ಟರ್ ಗೆ ಮತ್ತೊಂದು ಫೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಪ್ರೀತಿಯ ಬಿಜೆಪಿ ನಾಯಕರೇ, ಕಾಣೆಯಾಗಿರುವುದು ನಿಮ್ಮ ಪಕ್ಷದ ಅಧ್ಯಕ್ಷ, ಬಿಜೆಪಿಯ 25 ಸಂಸದರು, ವಿರೋಧ ಪಕ್ಷದ ನಾಯಕ ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಕುಹುಕವಾಡಿದೆ. 

ರಾಜ್ಯದಲ್ಲಿ ಬರದ ಕಾರಣ ವಿದ್ಯುತ್ ಉತ್ಪಾದನೆ ಇಳಿಕೆಯಾಗಿದ್ದು, ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸಚಿವ ಕೆಜೆ ಜಾರ್ಜ್ ಅವರು ನಿಮ್ಮದೇ  ಕೇಂದ್ರ ಸರ್ಕಾರದ ಸಚಿವರನ್ನು ಭೇಟಿಯಾಗಿ ಚರ್ಚಿಸಲು ದೆಹಲಿಗೆ ಹೋಗಿದ್ದಾರೆ.ನಿಮ್ಮ ಕೇಂದ್ರ ಸಚಿವರ ಕಾರ್ಯಕ್ರಮಗಳ ಬಗ್ಗೆ ನಿಮಗೆ ಮಾಹಿತಿ ಇಲ್ಲವೆಂದರೆ ನಿಮ್ಮಲ್ಲಿ ನೈತಿಕತೆ ಕಾಣೆಯಾಗಿರುವುದು ಸ್ಪಷ್ಪವಾಗುತ್ತದೆ. ನಮ್ಮ ಸಚಿವರು ಸದಾ ತಮ್ಮ ಹೊಣೆಗಾರಿಕೆಯ ಕೆಲಸಗಳಲ್ಲಿ ತೊಡಗಿರುತ್ತಾರೆ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಪೂರೈಸಲು ಬೇಕಾದ ಮಾರ್ಗಗಳನ್ನು ಹುಡುಕುತ್ತಾರೆ ಎಂದು ತಿರುಗೇಟು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com