ಇದು ಎಟಿಎಂ ಸರ್ಕಾರ...: ಕಾಂಗ್ರೆಸ್ ವಿರುದ್ಧ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ವಾಗ್ದಾಳಿ

ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಬೆಂಗಳೂರು ನಗರದ ಗುತ್ತಿಗೆದಾರರೊಬ್ಬರ ಮನೆಯಲ್ಲಿ 42 ಕೋಟಿ ರೂಪಾಯಿ ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದು ಇದು ATM ಸರ್ಕಾರ ಎಂಬುದು ಜಗಜ್ಜಾಹೀರಾಗಿದೆ ಎಂದು ಹೇಳಿದ್ದಾರೆ. 
ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ
Updated on

ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಬೆಂಗಳೂರು ನಗರದ ಗುತ್ತಿಗೆದಾರರೊಬ್ಬರ ಮನೆಯಲ್ಲಿ 42 ಕೋಟಿ ರೂಪಾಯಿ ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದು ಇದು ATM ಸರ್ಕಾರ ಎಂಬುದು ಜಗಜ್ಜಾಹೀರಾಗಿದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಕಮಿಷನ್ ದಂದೆ ನಡೆಯುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಘಟಕ ಪ್ರತಿಭಟನೆ ನಡೆಸುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯವನ್ನು ಲೂಟಿ ಮಾಡುತ್ತಿದೆ. 5 ರಾಜ್ಯಗಳಲ್ಲಿ ಚುನಾವಣೆಗೆ ಹಣ ಹೂಡಲು ಅಧಿಕಾರಿಗಳಿಂದ ವರ್ಗಾವಣೆ, ಗುತ್ತಿಗೆದಾರರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇದು ಎಟಿಎಂ ಸರ್ಕಾರ ಎಂದು ಆರೋಪಿಸಿದರು.

ಐಟಿ ದಾಳಿಯಿಂದ ಇವರ ಕುಕೃತ್ಯ ಸಂಪೂರ್ಣ ಬಯಲಾಗಿದೆ. ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಆದರೆ ಕಾಂಗ್ರೆಸ್ ಮತ್ತು ಡಿಕೆ ಶಿವಕುಮಾರ್ ಭ್ರಷ್ಟಾಚಾರದ ಟ್ರೇಡ್‌ಮಾರ್ಕ್‌ಗಳು. ಈ ಬಗ್ಗೆ ಸಿಬಿಐ ತನಿಖೆಗೆ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ. ರಾಜ್ಯದ ಜನರು ಸತ್ಯವನ್ನು ತಿಳಿದುಕೊಳ್ಳಬೇಕು. ಆಧಾರ ರಹಿತ ಆರೋಪ ಮಾಡಬೇಡಿ, ಸತ್ಯ ಹೊರಬರಲಿ ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ವಶಪಡಿಸಿಕೊಂಡ ಹಣ ಕಾಂಗ್ರೆಸ್ ಸರ್ಕಾರದ್ದು ಎಂಬ ಬಿಜೆಪಿ ಆರೋಪವನ್ನು ಡಿಸಿಎಂ ಡಿಕೆ ಶಿವಕುಮಾರ್ ತಳ್ಳಿಹಾಕಿದ್ದರು. ಇಷ್ಟೇ ಅಲ್ಲದೆ ಆದಾಯ ತೆರಿಗೆ ಇಲಾಖೆ ಸಂಪೂರ್ಣ ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದ ಮಾಜಿ ಸಿಎಂ ಸದಾನಂದ ಗೌಡ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಹಣ ವಸೂಲಿಯನ್ನು ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವುದು ಒಪ್ಪಲಾಗದು. ಪ್ರಾಯೋಗಿಕವಾಗಿ ಕೋಟ್ಯಂತರ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಇದಕ್ಕೆ ಐಟಿ ದಾಳಿ ಉದಾಹರಣೆ. ನಮಗೆ ಈ ಕುರಿತು ವಿಚಾರಣೆ ನಡೆಯಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡಲಿ, ಇದರ ಹಿಂದೆ ಇರುವ ವ್ಯಕ್ತಿಯನ್ನು ಪತ್ತೆ ಹಚ್ಚಿ ಶಿಕ್ಷೆ ನೀಡಬೇಕು ಎಂದರು.

ಅಕ್ಟೋಬರ್ 13ರಂದು ಬೆಂಗಳೂರು ನಗರದಲ್ಲಿ ಮಾಜಿ ಕಾರ್ಪೊರೇಟರ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು ಈ ವೇಳೆ 42 ಕೋಟಿ ರೂಪಾಯಿ ಪತ್ತೆಯಾಗಿತ್ತು.

ತನಿಖೆಯ ಗೌಪ್ಯ ಅಧಿಕಾರಿಗಳ ಪ್ರಕಾರ, ನಗದನ್ನು ಪೆಟ್ಟಿಗೆಗಳಲ್ಲಿ ಪ್ಯಾಕ್ ಮಾಡಿ ಕಾರ್ಪೊರೇಟರ್ ಗೆ ಸೇರಿದ ಫ್ಲ್ಯಾಟ್‌ನ ಹಾಸಿಗೆಯ ಕೆಳಗೆ ಇಡಲಾಗಿತ್ತು. ಮಾಜಿ ಕಾರ್ಪೊರೇಟರ್‌ಗೆ ಸಂಬಂಧಿಸಿದ ಐದು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತೆಲಂಗಾಣ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ಇತರ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಪ್ರಚಾರಕ್ಕಾಗಿ ಈ ಹಣವನ್ನು ಕಾಂಗ್ರೆಸ್‌ನ ಸಂಗ್ರಹಿಸಿದೆ ಎಂದು ಬಿಜೆಪಿ ಆರೋಪಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com