'ನಾನು ಜೆಡಿಎಸ್ ಅಧ್ಯಕ್ಷನಾಗಿದ್ದರೆ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿಯನ್ನು ಪಕ್ಷದಿಂದ ಉಚ್ಛಾಟಿಸುತ್ತಿದ್ದೆ'

ನಾನು ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದರೆ ಜಾತ್ಯಾತೀತ ವಾದವನ್ನು ಬದಿಗೊತ್ತಿ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಎಚ್.ಡಿ‌.ಕುಮಾರಸ್ವಾಮಿಯನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡುತ್ತಿದ್ದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಮೈಸೂರು: ನಾನು ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದರೆ ಜಾತ್ಯಾತೀತ ವಾದವನ್ನು ಬದಿಗೊತ್ತಿ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಎಚ್.ಡಿ‌.ಕುಮಾರಸ್ವಾಮಿಯನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡುತ್ತಿದ್ದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಇಂದಿನ ಪರಿಸ್ಥಿತಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತೆಗೆದುಕೊಂಡಿರುವ ನಿಲುವು ಸರಿಯಾಗಿದೆ, ಇಬ್ರಾಹಿಂ ಅವರಿಗೆ  ಅಧಿಕಾರವಿದ್ದು, ಅವರು ಕುಮಾರಸ್ವಾಮಿ ವಿರುದ್ಧ ಕ್ರಮ ಜರುಗಿಸಲಿದ್ದಾರೆ ಎಂದು ವಿಶ್ವನಾಥ್ ಹೇಳಿದರು.

ಇಬ್ರಾಹಿಂ ಅವರು ಜೆಡಿಎಸ್ ರಾಷ್ಟ್ರಾಧ್ಯಕ್ಷರಿಗೆ ವಿಧೇಯನಾಗಿರುತ್ತೇನೆ ಎಂದಿದ್ದಾರೆ. ಜಾತ್ಯಾತೀತವಾದವನ್ನು ಕೊಲೆ ಮಾಡಿ ಜಾತಿವಾದಿ ಕೋಮುವಾದಿಗಳ ಜೊತೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮದುವೆಯಾದರೆ ಒಪ್ಪಲು ಸಾಧ್ಯವೇ? ಹಾಗಾಗಿ ರಾಜ್ಯಾಧ್ಯಕ್ಷರಾಗಿ ಸಿ.ಎಂ‌.ಇಬ್ರಾಹಿಂ ಅವರಿಗೆ ಸಂಪೂರ್ಣ ಅಧಿಕಾರ ಇದ್ದು ಕುಮಾರಸ್ವಾಮಿ ಅವರ ಮೇಲೆ ಕ್ರಮ ಜರುಗಿಸಲಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com