ನಕಲಿ ವೋಟರ್ ಐಡಿ ಪ್ರಕರಣ; ಸಚಿವ ಭೈರತಿ ಸುರೇಶ್ ರಾಜೀನಾಮೆಗೆ ಬಿಜೆಪಿ ಆಗ್ರಹ

ನಕಲಿ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ನಕಲಿ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.

ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ಸಂವಿಧಾನ ವಿರೋಧಿ ಕೆಲಸವನ್ನು ಈ ಸರ್ಕಾರದ ಸಚಿವರು ಮಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಭೈರತಿ ಸುರೇಶ್. ಸುರೇಶ್ ಗೆಲ್ಲೋಕೆ ನಕಲಿ ವೋಟರ್ ಐಡಿ ಮಾಡಿದ್ದಾರೆ. ಮೌನೇಶ್ ಎಂಬ ಸುರೇಶ್ ಆಪ್ತರನ್ನ ಸಿಸಿಬಿ ಬಂಧನ ಮಾಡಿದೆ. ಅಕ್ರಮವಾಗಿ ಐಡಿ ಸಂಗ್ರಹ, ಆಧಾರ್ ಕಾರ್ಡ್ ಸೃಷ್ಟಿ ಮಾಡೋ ಕೆಲಸ ಮೌನೇಶ್ ಮಾಡಿದ್ದಾನೆ. ಇದಕ್ಕೆ ಕಾರಣ ಸಚಿವರು. ಹೀಗಾಗಿ ಭೈರತಿ ಸುರೇಶ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಇದೊಂದು ಅಕ್ರಮ. ಇದೊಂದು ಸಂವಿಧಾನ ವಿರೋಧಿ ಚಟುವಟಿಕೆ. ಸಿಸಿಬಿ ತನಿಖೆ ಸರಿಯಾಗಿ ಆಗಬೇಕು. ಎಷ್ಟು ನಕಲಿ ವೋಟರ್ ಐಡಿ ಮಾಡಿದರು? ಎಷ್ಟು ನಕಲಿ ಆಧಾರ್ ಮಾಡಿದ್ದಾರೆ ಅನ್ನೋ ಸಂಪೂರ್ಣ ತನಿಖೆ ಆಗಬೇಕು. ತನಿಖೆ ಆಗಿ ವರದಿ ಬರುವ ಹೊತ್ತಿಗೆ ಸಚಿವ ಭೈರತಿ ಸುರೇಶ್ ರಾಜೀನಾಮೆ ಕೊಡಬೇಕು. ಯಾವುದೇ ಪ್ರಭಾವ ಬೀರದೆ ತನಿಖೆ ಆಗಬೇಕಾದರೆ ಭೈರತಿ ಸುರೇಶ್ ರಾಜೀನಾಮೆ ಕೊಡಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com