ಬಿಜೆಪಿಯದ್ದು ನೀಚತನ, ಲೋಕಸಭೆ ಚುನಾವಣೆಯಲ್ಲಿ ಒಂದೇ ಒಂದು ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

ಕೇಂದ್ರವು ಬಡವರ ವಿರೋಧಿ ಮತ್ತು ಬಂಡವಾಳಶಾಹಿಗಳ ಪರವಾಗಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಒಂದೇ ಒಂದು ಮತವೂ ಹೋಗದಂತೆ ನೋಡಿಕೊಳ್ಳಬೇಕು ಎಂದು ಬುಧವಾರ ಜನರಿಗೆ ಕರೆ ನೀಡಿದರು.
ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Updated on

ಮಧುಗಿರಿ: ಕೇಂದ್ರವು ಬಡವರ ವಿರೋಧಿ ಮತ್ತು ಬಂಡವಾಳಶಾಹಿಗಳ ಪರವಾಗಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಒಂದೇ ಒಂದು ಮತವೂ ಹೋಗದಂತೆ ನೋಡಿಕೊಳ್ಳಬೇಕು ಎಂದು ಬುಧವಾರ ಜನರಿಗೆ ಕರೆ ನೀಡಿದರು.

ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡಲು ಕರ್ನಾಟಕಕ್ಕೆ ಅಕ್ಕಿ ನೀಡುವುದನ್ನು ನಿರಾಕರಿಸಿದ ಬಿಜೆಪಿಯನ್ನು ನೀಚ ಎಂದು ಕರೆದ ಅವರು, ಕೇಂದ್ರದ ಆಡಳಿತ ಪಕ್ಷವೂ ಮಾನವ ವಿರೋಧಿಯಾಗಿದೆ ಎಂದು ಹೇಳಿದರು.

ಕ್ಷೀರ ಭಾಗ್ಯ ಯೋಜನೆಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಹಿಂದಿನ ಅವಧಿಯಲ್ಲಿ ಸಿಎಂ ಆಗಿದ್ದಾಗ ಏಳು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆ. ಆದರೆ, ಹಿಂದಿನ ಬಿಜೆಪಿ ಸರ್ಕಾರ ಅದನ್ನು ನಾಲ್ಕು ಕೆ.ಜಿ ಮತ್ತು ಐದು ಕೆ.ಜಿಗೆ ಇಳಿಸಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಐದು ಕೆ.ಜಿ ನೀಡುವುದಾಗಿ ಭರವಸೆ ನೀಡಿದ್ದೆ ಎಂದರು. 

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ಭಾರತೀಯ ಆಹಾರ ನಿಗಮಕ್ಕೆ (ಎಫ್‌ಸಿಐ) ಪತ್ರ ಬರೆಯಲಾಗಿತ್ತು. ಎಫ್‌ಸಿಐ ಅಕ್ಕಿ ನೀಡುವುದಾಗಿ ಮೊದಲಿಗೆ ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿತ್ತು ಎಂದರು.

ನಾವು ಅವರನ್ನು (ಎಫ್‌ಸಿಐ) ನಂಬುತ್ತೇವೆ. ಆದರೆ, ಕೇಂದ್ರವು ನಮಗೆ ಅಕ್ಕಿ ನೀಡಲು ನಿರಾಕರಿಸಿದೆ. ಬಿಜೆಪಿ ಬಡವರ ಪರವೇ? ಇಲ್ಲ ಅವರು ಬಡವರ ಪರವಾಗಿಲ್ಲ. ನಾವು ಅಕ್ಕಿಯನ್ನು ಉಚಿತವಾಗಿ ಕೇಳಿಲ್ಲ. ನಾವು ಹಣ ಪಾವತಿಸಲು ಸಿದ್ಧರಿದ್ದೇವೆ. ಮೊದಲಿಗೆ ನಾವು ಅಕ್ಕಿ ಕೇಳಿದಾಗ ಅವರು ಒಪ್ಪಿದರು ಮತ್ತು ನಂತರ ಹಿಂದೆ ಸರಿದರು. ಅವರೆಷ್ಟು ನೀಚರು ಎಂದು ನೀವೇ ನಿರ್ಧರಿಸಿ. ಅವರು ಬಡವರ ವಿರೋಧಿಗಳು. ಅವರಿಗೆ ಮಾನವೀಯತೆ ಇಲ್ಲ ಎಂದು ಆರೋಪಿಸಿದರು.

ಕರ್ನಾಟಕಕ್ಕೆ ಅಕ್ಕಿ ನೀಡುವುದರಿಂದ ಕೇಂದ್ರ ಹಿಂದೆ ಸರಿದಿರುವ ಕಾರಣವನ್ನು ವಿವರಿಸಿದ ಮುಖ್ಯಮಂತ್ರಿ, ಬಡವರಿಗೆ ಉಚಿತ ಅಕ್ಕಿ ನೀಡಿದರೆ ಆ ರಾಜ್ಯಗಳು ದಿವಾಳಿಯಾಗುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ನಾವು ಐದು ಖಾತರಿಗಳನ್ನು ಜಾರಿಗೆ ತರುತ್ತೇವೆ ಮತ್ತು ರಾಜ್ಯವನ್ನು ದಿವಾಳಿಯಾಗಲು ಬಿಡುವುದಿಲ್ಲ. ಐದು ಚುನಾವಣಾ ಖಾತರಿಗಳ ಪೈಕಿ ನಾಲ್ಕನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುತ್ತೀರಾ ಎಂದು ಜನರನ್ನು ಕೇಳಿದರು. ಒಂದು ಮತವೂ ಅವರಿಗೆ (ಬಿಜೆಪಿ) ಹೋಗಬಾರದು. ಏಕೆಂದರೆ, ಈ ಯೋಜನೆಗಳು ರಾಜ್ಯವನ್ನು ದಿವಾಳಿಯಾಗಿಸುತ್ತದೆ. ಬಡವರಿಗೆ ಉಚಿತವಾಗಿ ಕೊಟ್ಟರೆ ರಾಜ್ಯ ದಿವಾಳಿಯಾಗುತ್ತದೆಯೇ? ಅಂಬಾನಿ, ಅದಾನಿಗೆ ಹಣ ಕೊಟ್ಟರೆ? ದೇಶ ಅಥವಾ ಬಡವರು ಏಳಿಗೆ ಹೊಂದುತ್ತಾರೆಯೇ? ಎಂದು ಪ್ರಶ್ನಿಸಿದರು.

ಅಂಬಾನಿ ಮತ್ತು ಅದಾನಿ ಶ್ರೀಮಂತರಾದರೆ, ಬಡವರು ಬಡವರಾಗಿಯೇ ಉಳಿದಿದ್ದಾರೆ. ಪ್ರತಿದಿನ 54.68 ಲಕ್ಷ ಸರ್ಕಾರಿ ಶಾಲಾ ಮಕ್ಕಳಿಗೆ ಹಾಲು ನೀಡುತ್ತಿರುವ ‘ಕ್ಷೀರ ಭಾಗ್ಯ’ ಯೋಜನೆಗೆ 10 ವರ್ಷ ಪೂರೈಸಿದ ಸಂಭ್ರಮದಲ್ಲಿರುವ ಮುಖ್ಯಮಂತ್ರಿ, ಇದೊಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದ ಯೋಜನೆಯಾಗಿದೆ ಎಂದರು.

ಹಾಲು ಗರಿಷ್ಠ ಕ್ಯಾಲ್ಸಿಯಂ ಹೊಂದಿರುವ ಸಂಪೂರ್ಣ ಆಹಾರವಾಗಿದೆ ಮತ್ತು ಪ್ರತಿ ವಯಸ್ಸಿನ ಜನರು ಇದನ್ನು ಕುಡಿಯಬಹುದು. ಹೀಗಾಗಿ ಹಾಲು ಉತ್ಪಾದಕರಿಂದ ಹಾಲು ಖರೀದಿಸಿ ಮಕ್ಕಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ರಾಜ್ಯ ಸರ್ಕಾರ 1000 ಕೋಟಿ ರೂ. ಗೂ ಹೆಚ್ಚು ಹಣ ವೆಚ್ಚ ಮಾಡಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com