ಬೆಂಗಳೂರು: ಈ ಬಾರಿ ದಕ್ಷಿಣ ಮಿಷನ್, ವಿಶೇಷವಾಗಿ ಕರ್ನಾಟಕ ಚುನಾವಣೆಯಲ್ಲಿ 130 ಸ್ಥಾನಗಳೊಂದಿಗೆ ಬಿಜೆಪಿ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾಗಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಜನತೆ ಈ ಬಾರಿ ಬಹುಮತದ ಸರ್ಕಾರವನ್ನು ಬಯಸಿದ್ದಾರೆ. ಕಾಂಗ್ರೆಸ್ ಗೆಲ್ಲುವುದು ಕನಸಿನ ಮಾತು. ಉತ್ತಮ ಆಡಳಿತ ನೀಡಲು ಸಂಪೂರ್ಣ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಬಿಜೆಪಿ ಕಾರ್ಯಕರ್ತರ ಗುರಿಯಾಗಿದೆ ಎಂದರು.
Advertisement