ಕರ್ನಾಟಕ ಚುನಾವಣೆ: ಕಾಂಗ್ರೆಸ್ ಈಗಿರುವ 79 ಸ್ಥಾನ ಕೂಡಾ ತಲುಪಲ್ಲ- ಅಶ್ವತ್ಥ ನಾರಾಯಣ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈಗಿರುವ 79 ಸ್ಥಾನ ಕೂಡಾ ತಲುಪಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಭವಿಷ್ಯ ನುಡಿದಿದ್ದಾರೆ. 
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈಗಿರುವ 79 ಸ್ಥಾನ ಕೂಡಾ ತಲುಪಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಭವಿಷ್ಯ ನುಡಿದಿದ್ದಾರೆ. 

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಕಾಂಗ್ರೆಸ್ ಶಾಸಕರ ಸಂಖ್ಯೆ 79 ಆಗಿದೆ. ಆದರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲ್ಲ ಎಂದರು.

ಬಿಜೆಪಿ ಸಂಪೂರ್ಣ ಬಹಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ದಾಖಲೆ ಮತಗಳ ಅಂತರದೊಂದಿಗೆ ದಿಗ್ವಿಜಯ ಭಾರಿಸಲಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com