ವರುಣಾದಲ್ಲಿ ಸಿದ್ದರಾಮಯ್ಯ ಲಾಸ್ಟ್ ಎಲೆಕ್ಷನ್ ಥೀಮ್: ಸಿದ್ದು ತವರಲ್ಲಿ ಎಚ್ ಡಿಕೆ 'ಅಹಿಂದ' ಕಾರ್ಡ್ ಗೇಮ್!

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರುತ್ತಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ವರುಣಾದಲ್ಲಿ ಅಹಿಂದ ಸಮಾವೇಶ ಆಯೋಜಿಸುವ ಮೂಲಕ ಜೆಡಿಎಸ್ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದರು.
ಎಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
ಎಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
Updated on

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರುತ್ತಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ವರುಣಾದಲ್ಲಿ ಅಹಿಂದ ಸಮಾವೇಶ ಆಯೋಜಿಸುವ ಮೂಲಕ ಜೆಡಿಎಸ್ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದರು.

ವರುಣಾದಲ್ಲಿ ಅಹಿಂದ ಪ್ರಮುಖ ನಾಯಕ ಸಿದ್ದರಾಮಯ್ಯ ಅವರು ಮಾಮೂಲಿಯಾಗಿರಲು ಜೆಡಿಎಸ್ ಬಿಡುತ್ತಿಲ್ಲ. ಬಿಜೆಪಿ ಹಿರಿಯ ಲಿಂಗಾಯತ ನಾಯಕ ವಿ ಸೋಮಣ್ಣ ಅವರನ್ನು ಕ್ಷೇತ್ರದಿಂದ ಅಭ್ಯರ್ಥಿ ಎಂದು ಘೋಷಿಸಿದ ನಂತರ, ಲಿಂಗಾಯತ ಅಭಿಷೇಕ್ ಬದಲಿಗೆ ದಲಿತರಾದ ಮಾಜಿ ಶಾಸಕ ಭಾರತಿ ಶಂಕರ್ ಅವರನ್ನು ಕಣಕ್ಕಿಳಿಸುವ ಮೂಲಕ ಜೆಡಿಎಸ್ ಕಾರ್ಯತಂತ್ರ ನಡೆಸಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಒಂದು ದಿನದ ನಂತರ ಕುಮಾರಸ್ವಾಮಿ ಅವರು ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ತಮ್ಮ ಪಂಚರತ್ನ ಯಾತ್ರೆಯು ಡಾ ಬಿ ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನದ ತತ್ವಗಳನ್ನು ಆಧರಿಸಿದೆ ಎಂದು ಅವರು ಮತದಾರರಿಗೆ ತಿಳಿಸಿದರು.

ವರುಣಾದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಹೊಂದಾಣಿಕೆ ಇಲ್ಲ ಎಂದು ಪುನರುಚ್ಚರಿಸಿದ ಅವರು, ಪ್ರಾದೇಶಿಕ ಪಕ್ಷಕ್ಕೆ ಸ್ಥಾನ ಗೆಲ್ಲುವುದು ಮುಖ್ಯ. ವರುಣಾ ಕ್ಷೇತ್ರದ ಮೂರು ಹೋಬಳಿಗಳನ್ನು ಪ್ರತಿನಿಧಿಸಿದ್ದರಿಂದ ಟಿ.ನರಸೀಪುರದ ಮಾಜಿ ಶಾಸಕ ಭಾರತಿ ಶಂಕರ್ ಅವರನ್ನು ಕಣಕ್ಕಿಳಿಸಿದ್ದೇವೆ. ನಮ್ಮ ಅಭ್ಯರ್ಥಿ ವರುಣಾದಲ್ಲಿ ಚುನಾವಣೆ ಎದುರಿಸಲು ಸಮರ್ಥರಾಗಿದ್ದಾರೆ ಎಂದಿದ್ದಾರೆ.

ವಸತಿ ಸಚಿವ ಸೋಮಣ್ಣ ವಿರುದ್ಧವೂ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ,  ಚನಪಟ್ಟಣ ಕ್ಷೇತ್ರದಲ್ಲಿ ತಮ್ಮ ಇಲಾಖೆಯಿಂದ ಒಂದು ಮನೆ ಕೂಡ ಮಂಜೂರಾಗಿಲ್ಲ. ದನಿಯಿಲ್ಲದ ಸಮುದಾಯಗಳಿಗೆ ಮೀಸಲಾತಿ ನೀಡಬೇಕು ಎಂದು ಸಂವಿಧಾನ ಹೇಳುತ್ತಿರುವಾಗ ಸರಕಾರ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ಹಿಂಪಡೆದು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಿಕೆ ಮಾಡಿರುವುದು ದುರದೃಷ್ಟಕರ ಎಂದರು.

ಸೋಮಣ್ಣ ಹಣದ ಚೀಲದೊಂದಿಗೆ ಬರಬಹುದು ಮತ್ತು ಸಿದ್ದರಾಮಯ್ಯ ಕೊನೆಯ ಎಲೆಕ್ಷನ್ ಕಾರ್ಡ್ ಆಡುತ್ತಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಭಾರತಿ ಶಂಕರ್ ಕೂಡ ರಾಜಕೀಯಕ್ಕೆ ಇಳಿದು ಜನರ ವಿಶ್ವಾಸ ಗಳಿಸಬೇಕು ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡದ ಕಾರಣ ಕರ್ನಾಟಕದಲ್ಲಿ ಯಾವುದೇ ಮ್ಯಾಜಿಕ್ ಮಾಡುವುದಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಶಾ ಅವರ ಪಥಸಂಚಲನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋತಿದ್ದಾರೆ ಎಂದು ಟೀಕಿಸಿದ್ದಾರೆ.

ಸಿದ್ದರಾಮಯ್ಯನವರ ಲಿಂಗಾಯತ ಮುಖ್ಯಮಂತ್ರಿ ಟೀಕೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ಯಾವ ಸಂದರ್ಭದಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ ಎಂದು ತಿಳಿದಿಲ್ಲ. ಭ್ರಷ್ಟಾಚಾರವು ಒಂದು ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾಗಿಲ್ಲ ಮತ್ತು ಚುನಾವಣೆಯ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

ಚುನಾವಣಾ ಪ್ರಚಾರದ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಅವರ ಹೆಸರು ಬಳಸಿದ ಬಗ್ಗೆ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದೇಗೌಡರ ಹೇಳಿಕೆಯನ್ನು ನಂಬಬೇಡಿ ಎಂದು ಒಕ್ಕಲಿಗ ಸಮುದಾಯಕ್ಕೆ ಮನವಿ ಮಾಡಿದ ಅವರು, ಪಕ್ಷದ ಅಭ್ಯರ್ಥಿ ಜಿಟಿ ದೇವೇಗೌಡರು ಭಾರಿ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com