ಅಳಿಯನಿಗೆ ಸಿಗದ ಟಿಕೆಟ್: ಇಳಿ ವಯಸ್ಸಿನಲ್ಲಿ ನೋವಿನಿಂದ ಕಾಂಗ್ರೆಸ್ ತೊರೆದ ಮಾಜಿ ಶಾಸಕ ಶಫಿ ಅಹ್ಮದ್

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ನಾಲ್ಕು ದಶಕಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ್ದರೂ ಕಾಂಗ್ರೆಸ್ ನನಗೆ ಗೌರವ ನೀಡಲು ವಿಫಲವಾಗಿದೆ ಎಂದು ಅವರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.
ಶಫಿ ಅಹ್ಮದ್
ಶಫಿ ಅಹ್ಮದ್

ತುಮಕೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಮಾಜಿ ಶಾಸಕ ಎಸ್.ಶಫಿ ಅಹಮದ್ (74) ಜೆಡಿಎಸ್ ಸೇರಲು ಮುಂದಾಗಿದ್ದಾರೆ. ತಮ್ಮ ಅಳಿಯ ರಫಿಕ್ ಅಹಮ್ಮದ್‌ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಶಫಿ ಅಹ್ಮದ್ ಪಕ್ಷ ತೊರೆದು ಜೆಡಿಎಸ್ ಸೇರಲು ಸಿದ್ಧರಾಗಿದ್ದಾರೆ.

ಅವರು ಬುಧವಾರ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ನಾಲ್ಕು ದಶಕಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ್ದರೂ ಕಾಂಗ್ರೆಸ್ ನನಗೆ ಗೌರವವನ್ನು ನೀಡಲು ವಿಫಲವಾಗಿದೆ ಎಂದು ಅವರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಅನನುಭವಿ ಇಕ್ಬಾಲ್ ಅಹಮದ್‌ಗೆ ಒಲವು ತೋರಿದ ಹಿನ್ನೆಲೆಯಲ್ಲಿ ಶಫಿ ಅವರ ಅಳಿಯ ಮತ್ತು ಮಾಜಿ ಶಾಸಕ ಡಾ.ರಫೀಕ್ ಅಹಮದ್‌ಗೆ ತುಮಕೂರು ಟಿಕೆಟ್ ನಿರಾಕರಿಸಲಾಗಿದೆ. ಇದರಿಂದ ಅಸಮಾಧಾನಗೊಂಡ ಶಫಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕರಾಗಿದ್ದರು. ಹಲವು ವರ್ಷಗಳ ಕಾಲ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದರು. ರಫಿಕ್ ಅಹ್ಮದ್ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಮುನಿಸಿಕೊಂಡು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

ಕೆಪಿಸಿಸಿ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ನಾಯಕರು ಮನವೊಲಿಸುವ ಪ್ರಯತ್ನ ನಡೆಸಿದ್ದರು. ಆದರೆ ಜಿಲ್ಲಾ ಮಟ್ಟದ ನಾಯಕರು ಸ್ಪಂದಿಸಲಿಲ್ಲ ಎಂಬ ಕಾರಣಕ್ಕೆ ಪಕ್ಷ ತೊರೆಯುತ್ತಿದ್ದಾರೆ. ಶಫಿ ಅಹ್ಮದ್ ಜೆಡಿಎಸ್‌ ಪ್ರವೇಶದಿಂದ ತುಮಕೂರು ನಗರ ಮತ್ತು ಕೊರಟಗೆರೆಯಲ್ಲಿ ಕೇಸರಿ ಪಕ್ಷಕ್ಕೆ ಹೊಡೆತ ಬೀಳುವ ಸಾಧ್ಯತೆಯಿದೆ.

ಜೆಡಿಎಸ್ ಅಭ್ಯರ್ಥಿ ಸುಮಾರು 3,000 ಮತಗಳನ್ನು ಹೊಂದಿರುವ 'ಬಲಿಜ' ಸಮುದಾಯದಿಂದ ಬಂದಿದ್ದಾರೆ. ಅಲ್ಪಸಂಖ್ಯಾತರು 75,000 ಮತಗಳನ್ನು ಹೊಂದಿದ್ದು, ಕಾಂಗ್ರೆಸ್ ಗೆ ಗೆಲ್ಲಲು ಉತ್ತಮ ಅವಕಾಶಗಳಿವೆ ಎಂಬುದನ್ನು ಅಲ್ಪಸಂಖ್ಯಾತ ಮುಖಂಡರು ಅರಿತುಕೊಳ್ಳಬೇಕು ಎಂದು ರಾಜ್ಯ ಅಧ್ಯಕ್ಷ ಜಬ್ಬಾರ್ ಖಾನ್ ನಡೆಸಿದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com