ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ

ಅಮಿತ್ ಶಾ ಗಲಭೆ ಹೇಳಿಕೆ: ಚುನಾವಣಾ ಆಯೋಗ, ಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧಾರ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಧೆ, ಗಲಭೆಗಳು ಏಳಬಹುದು ಎಂದು ನಿನ್ನೆ ಬುಧವಾರ ಸಾರ್ವಜನಿಕ ರ‍್ಯಾಲಿಯಲ್ಲಿ ಹೇಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೇಸು ದಾಖಲಿಸಲು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಲು ಚಿಂತನೆ ನಡೆಸಿದೆ.

ಹುಬ್ಬಳ್ಳಿ, ಬೆಳಗಾವಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ದಂಧೆ, ಗಲಭೆಗಳು ಏಳಬಹುದು ಎಂದು ನಿನ್ನೆ ಬುಧವಾರ ಸಾರ್ವಜನಿಕ ರ‍್ಯಾಲಿಯಲ್ಲಿ ಹೇಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೇಸು ದಾಖಲಿಸಲು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಲು ಚಿಂತನೆ ನಡೆಸಿದೆ. ಈ ಬಗ್ಗೆ ಕಾನೂನು ಆಯ್ಕೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಹತಾಶೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಇಂತಹ ಮಾತುಗಳು ಜನರನ್ನು ಪ್ರಚೋದಿಸುತ್ತವೆ.  ಕೇಂದ್ರದ ಗೃಹ ಸಚಿವರಾಗಿ ಇಂತಹ ಹೇಳಿಕೆಗಳನ್ನು ನೀಡುವುದು ಎಷ್ಟು ಸರಿ,  ಅವರು ಹಿಂದೂ ಮತ್ತು ಮುಸ್ಲಿಮರ ನಡುವೆ ಕೋಮು ವೈಷಮ್ಯವನ್ನು ಸೃಷ್ಟಿಸುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ಕೋಮುಗಲಭೆ ಸೃಷ್ಟಿಸುತ್ತದೆ ಎಂಬುದು ಅವರ ಹೇಳಿಕೆಯ ಅರ್ಥವಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಎಲ್ಲರಿಗೂ ಶಿಕ್ಷಣ ನೀಡಿದೆ ಎಂದರು. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಜನಿಸಿದ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನಾವು ಕಲಿಸಿದ್ದೇವೆ. ಖಾಸಗೀಕರಣದ ಹೆಸರಿನಲ್ಲಿ ಬಿಜೆಪಿಯವರು ಈಗ ವಿಮಾನ ನಿಲ್ದಾಣಗಳು, ರಸ್ತೆಗಳು ಮತ್ತು ಸರ್ಕಾರಿ ಉದ್ಯಮಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ ಎಂದು ಆರೋಪಿಸಿದರು.

ಒಬ್ಬ ಉದ್ಯಮಿಯ ನಕಲಿ ಕಂಪನಿಗೆ ಹಣ ನೀಡಿದ ಮೋದಿ ಅವರು ಎಲ್ಲಿಗೆ ಭೇಟಿ ನೀಡಿದರೂ ಆತಿಥ್ಯ ನೀಡುವುದರಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ ಖರ್ಗೆ, ಕರ್ನಾಟಕದಲ್ಲಿ ಮೋದಿಯವರ ತಂಡವು ಸಿವಿಲ್ ಗುತ್ತಿಗೆದಾರರಿಂದ ಶೇಕಡಾ 40 ರಷ್ಟು ಕಮಿಷನ್ ಸಂಗ್ರಹಿಸುವಲ್ಲಿ ನಿರತವಾಗಿದೆ. ಇದಕ್ಕೆ ಮೋದಿ ಉತ್ತರಿಸಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ ಸುಮಾರು 25 ಲಕ್ಷ ಯುವಕರು ನಿರುದ್ಯೋಗಿಗಳಾಗಿದ್ದಾರೆ. ವಿಪರ್ಯಾಸವೆಂದರೆ, ಸರ್ಕಾರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಕಳೆದ ಎರಡು ವರ್ಷಗಳಲ್ಲಿ ಹಣದುಬ್ಬರ ಮಿತಿಮೀರಿದೆ, ಆದರೆ ಮೋದಿ ಅವರು ಪ್ರತಿ ವಸ್ತುವಿನ ಮೇಲೆ ಜಿಎಸ್‌ಟಿ ಹೇರುವ ಮೂಲಕ ಬಡ ಜನರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ ಎಂದು ಆರೋಪಿಸಿದರು.

ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯ ನೆಪದಲ್ಲಿ ಮೋದಿ ಮತ್ತು ಶಾ ರಾಜ್ಯಕ್ಕೆ ಚುನಾವಣೆಗೆ ಹೊತ್ತಿನಲ್ಲಿ ಭೇಟಿ ನೀಡುತ್ತಾರೆ. ಸರ್ಕಾರದ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿ ರಾಜಕೀಯ ಪ್ರಚಾರಕ್ಕಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.

ಮೋದಿ ಮತ್ತು ಶಾ ಸರ್ಕಾರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಮಾಜಿ ಸಂಸದ ರಾಹುಲ್ ಗಾಂಧಿಯವರಂತೆ ಗುಜರಾತ್‌ನ ಬಿಜೆಪಿ ಸಂಸದರೊಬ್ಬರು ಮೂರು ವರ್ಷಗಳ ಕಾಲ ಕೆಳ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದರೂ ತಿಂಗಳುಗಳ ಕಾಲ ಸಂಸದರಾಗಿ ಮುಂದುವರಿಯಲು ಅವಕಾಶ ನೀಡಲಾಗಿತ್ತು. 2019ರ ಲೋಕಸಭೆ ಚುನಾವಣೆಗೂ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು.

ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯ ನೆಪದಲ್ಲಿ ಮೋದಿ ಮತ್ತು ಶಾ ರಾಜ್ಯಕ್ಕೆ ಚುನಾವಣೆಗೆ ತಿಂಗಳ ಹಿಂದೆ ಭೇಟಿ ನೀಡುತ್ತಿದ್ದಾರೆ, ಆದರೆ ಈ ಪ್ರತಿಯೊಂದು ಕಾರ್ಯಕ್ರಮವನ್ನು ಪಕ್ಷದ ಕಾರ್ಯಕ್ರಮವನ್ನಾಗಿ ಪರಿವರ್ತಿಸಿ ರಾಜಕೀಯ ಪ್ರಚಾರಕ್ಕಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದರು.

ಮೋದಿ ಮತ್ತು ಶಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಮಾಜಿ ಸಂಸದ ರಾಹುಲ್ ಗಾಂಧಿಯವರಂತೆ ಗುಜರಾತ್‌ನ ಬಿಜೆಪಿ ಸಂಸದರು ಮೂರು ವರ್ಷಗಳ ಕಾಲ ಕೆಳ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿದ್ದರೂ ಮತ್ತು ತಿಂಗಳುಗಳ ಕಾಲ ಸಂಸದರಾಗಿ ಮುಂದುವರಿಯಲು ಅವಕಾಶ ನೀಡಿದ್ದರೂ ಅನರ್ಹಗೊಳಿಸಲಾಗಿಲ್ಲ ಎಂದು ಹೇಳಿದರು. 2019ರ ಲೋಕಸಭೆ ಚುನಾವಣೆಗೂ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು ಎಂದು ದೂರಿದರು.

Related Stories

No stories found.

Advertisement

X
Kannada Prabha
www.kannadaprabha.com