ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ, ತಕ್ಷಣ ವೈದ್ಯರಿಂದ ಉಪಚಾರ

ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ.
ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ
ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ
Updated on

ವಿಜಯನಗರ: ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರ ಪ್ರಚಾರ ಮಾಡುವುದಕ್ಕಾಗಿ ಹೆಲಿಕಾಪ್ಟರ್​ ಮೂಲಕ ಕೂಡ್ಲಗಿಗೆ ಕೂಡ್ಲಿಗಿಗೆ ತೆರಳಿದ್ದರು.

ಹೆಲಿಕ್ಯಾಪ್ಟರನಿಂದ ಇಳಿದ ಕೂಡಲೇ ಮೊಬೈಲ್​ನಲ್ಲಿ ಬ್ಯೂಸಿ ಆದ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ಕಾರಿನ ಬಳಿ ಆಗಮಿಸಿದ್ದಾರೆ. ನಂತರ ಕಾರಿನೊಳಗೆ ಕೂಡಬೇಕೆನ್ನುವಷ್ಟರಲ್ಲಿ ಬಾಗಿಲ ಬಳಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೆ ಸ್ಥಳದಲ್ಲಿದ್ದ ಅವರ ಅಂಗರಕ್ಷಕ ನೆರವಿಗೆ ಧಾವಿಸಿ ಕೈ ಹಿಡಿದು ಎತ್ತಿದ್ದಾರೆ.

ನಂತರ ಕಾರಿನ ಸೀಟಿನ ಮೇಲೆ ಕೂಡಿಸಿ ವೈದ್ಯರು ಗುಕ್ಲೋಸ್ ನೀಡಿದ್ದಾರೆ. ಗುಕ್ಲೋಸ್ ಕುಡಿದ ಬಳಿಕ ಚೇತರಿಸಿಕೊಂಡು ಮತ್ತೆ ಸಿದ್ದರಾಮಯ್ಯ ಜನರತ್ತ ಕೈ ಬೀಸಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಬಿಡುವಿಲ್ಲದೆ ಓಡಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ವಲ್ಪ ಸುಸ್ತು ಆದಂತೆ ಕಂಡುಬಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com