ನರೇಂದ್ರ ಮೋದಿ
ನರೇಂದ್ರ ಮೋದಿ

ರಾಜ್ಯ ವಿಪಕ್ಷ ನಾಯಕನ ಸ್ಥಾನಕ್ಕೆ ಮೋದಿ ಟವಲ್ ಹಾಕಿದ್ದಾರಾ; ನಮ್ಮ ಗ್ಯಾರಂಟಿ ಯೋಜನೆಗಳು ಅವರ ನಿದ್ದೆಗೆಡಿಸಿವೆಯೇ?

ಕರ್ನಾಟಕದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ  ಅವರೇ ವಹಿಸಿಕೊಂಡಂತಿದೆ ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.
Published on

ಬೆಂಗಳೂರು: ಕರ್ನಾಟಕದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ವಹಿಸಿಕೊಂಡಂತಿದೆ ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬೇರೆಲ್ಲಾ ಕೆಲಸ ಬಿಟ್ಟು ಕರ್ನಾಟಕದ ಬಗ್ಗೆ, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ನಿರಂತರವಾಗಿ ಮಾತಾಡುತ್ತಿದ್ದಾರೆ, ವಿಪಕ್ಷ ನಾಯಕನ ಸ್ಥಾನಕ್ಕೆ ಮೋದಿಯರು ಟವಲ್ ಹಾಕಿದ್ದಾರಾ ಎಂದು ರಾಜ್ಯ ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.

ಮಣಿಪುರ, ಹರ್ಯಾಣಗಳ ಹೊತ್ತಿ ಉರಿದರೂ ಅತ್ತ ಸುಳಿಯದ ಪ್ರಧಾನಿಗೆ ನಮ್ಮ ಸರ್ಕಾರದ ಮೇಲೆ ಏಕಿಷ್ಟು ಆಸಕ್ತಿ? ಯಶಸ್ವಿಯಾದ ನಮ್ಮ ಗ್ಯಾರಂಟಿ ಯೋಜನೆಗಳು ಮೋದಿಯವರ ನಿದ್ದೆಗೆಡಿಸಿವೆಯೇ? ಎಂದು ತಪರಾಕಿ ಹಾಕಿದೆ.

ಮಧ್ಯಪ್ರದೇಶದಲ್ಲಿ ದಲಿತರಿಗೆ ಮೂತ್ರ ಕುಡಿಸಲಾಗುತ್ತಿದೆ, ಹರ್ಯಾಣ ಗಲಭೆಯಲ್ಲಿ ಹೊತ್ತಿ ಉರಿಯುತ್ತಿದೆ, ಮಣಿಪುರದಲ್ಲಿ ಮಹಿಳೆಯರನ್ನು ಅತ್ಯಾಚಾರ ಎಸಗಿ ಬೆತ್ತಲೆ ಮೆರವಣಿಗೆ ಮಾಡಲಾಗುತ್ತಿದೆ, ಎಲ್ಲವೂ ಬಿಜೆಪಿ ಆಡಳಿತದ ರಾಜ್ಯಗಳೇ, ಕರ್ನಾಟಕದ ಬಗ್ಗೆ ಮಾತಾಡುವ ಪ್ರಧಾನಿ ನರೇಂದ್ರ ಮೋದಿ  ತಮ್ಮ ಡಬಲ್ ಇಂಜಿನ್ ರಾಜ್ಯಗಳ ಅವಾಂತರಗಳನ್ನು ಗಮನಿಸಲಿ ಎಂದು ಕಾಂಗ್ರೆಸ್ ಕಿಡಿ ಕಾರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com