ಸೇಡಿನ ರಾಜಕಾರಣ ಬಯಸುತ್ತಿಲ್ಲ, ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶ: ಡಿ.ಕೆ.ಶಿವಕುಮಾರ್

ಸೇಡಿನ ರಾಜಕಾರಣ ಮಾಡುವುದು ನಮಗಿಷ್ಟವಿಲ್ಲ. ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶವಾಗಿದೆ ಎಂಡು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ನವದೆಹಲಿ: ಸೇಡಿನ ರಾಜಕಾರಣ ಮಾಡುವುದು ನಮಗಿಷ್ಟವಿಲ್ಲ. ನ್ಯಾಯ ಕೊಡಿಸುವುದಷ್ಟೇ ನಮ್ಮ ಉದ್ದೇಶವಾಗಿದೆ ಎಂಡು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಆಳ್ವಿಕೆಯಲ್ಲಿ ನಡೆದ ಕೋವಿಡ್ ಅಕ್ರಮಗಳ ಕುರಿತುಸರ್ಕಾರ ತನಿಖೆಗೆ ಆದೇಶಿಸಿರುವ ಕುರಿತು ಉಪ ಮುಖ್ಯಮಂತ್ರಿಗಳು ಇಂದು ಪ್ರತಿಕ್ರಿಯೆ ನೀಡಿದ್ದಾರೆ.

ಸೇಡಿನ ರಾಜಕಾರಣವನ್ನು ನಾವು ಬಯಸುತ್ತಿಲ್ಲ. ನಮಗೆ ನ್ಯಾಯ ಸಿಗಬೇಕಷ್ಚೇ. ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ಆದರೆ, ಸಚಿವರು ಕೇವಲ 3 ಜನರಷ್ಟೇ ಸಾವನ್ನಪ್ಪಿದ್ದರು ಎಂದು ಹೇಳಿದ್ದರು. ಘಟನೆ ಸಂಬಂಧ ಒಬ್ಬ ಸಿಬ್ಬಂದಿಯನ್ನೂ ಕೂಡ ಅಮಾನತುಗೊಳಿಸಿಲ್ಲ. ಯಾರನ್ನೂ ಹೊಣೆಗಾರರನ್ನಾಗಿ ಮಾಡಿಲ್ಲ. ಇದನ್ನು ತನಿಖೆ ಮಾಡಬಾರದೇ? ಎಂದು ಪ್ರಶ್ನಿಸಿದರು.

ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ಹಣವನ್ನು ಬಳಕೆ ಮಾಡಲಾಗಿದೆ. ಆದರೆ, ಬಳಕೆ ಮಾಡಿರುವ ಹಣಕ್ಕೂ, ಸರ್ಕಾರ ನೀಡಿರುವ ಲೆಕ್ಕಕ್ಕೂ ದೊಡ್ಡ ವ್ಯತ್ಯಾಸಗಳು ಕಂಡು ಬಂದಿದೆ. ಈ ವ್ಯತ್ಯಾಸ ಶೇ.10-20ರಷ್ಟಿಲ್ಲ. ಶೇ.100ಕ್ಕಿಂತ ಹೆಚ್ಚಾಗಿದೆ. ಸರ್ಕಾರ ಇದನ್ನೆಲ್ಲಾ ಪರಿಶೀಲನೆ ನಡೆಸುವುದು ಅಗತ್ಯವಿದೆ. ಕಾಮಗಾರಿ ಕಾರ್ಯಗಳ ಕುರಿತು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಗುತ್ತಿಗದಾರರು ಅಳಲು ತೋಡಿಕೊಳ್ಳುತ್ತಿದ್ದಾರೆ. ಇವೆಲ್ಲದರ ಕುರಿತು ನಾವು ತನಿಖೆ ನಡೆಸಬೇಕು. ರಾಜ್ಯ ಜನತೆಗೆ ನ್ಯಾಯ ಕೊಡಿಸಬೇಕೆಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com