ರಾಜ್ಯ ವಿಧಾನಸಭೆ ಚುನಾವಣೆ: ಬಿಜೆಪಿ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ನೇಮಿಸಿದೆ.
ಧರ್ಮೇಂದ್ರ ಪ್ರಧಾನ್ ಮತ್ತು ಅಣ್ಣಾಮಲೈ
ಧರ್ಮೇಂದ್ರ ಪ್ರಧಾನ್ ಮತ್ತು ಅಣ್ಣಾಮಲೈ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಉಸ್ತುವಾರಿಯನ್ನಾಗಿ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯನ್ನಾಗಿ ಕೆ.ಅಣ್ಣಾಮಲೈ ಅವರನ್ನು ಬಿಜೆಪಿ ನೇಮಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಲಹೆಯಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ಈ ನೇಮಕದ ಆದೇಶವನ್ನು ಹೊರಡಿಸಿದ್ದಾರೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ. ಧರ್ಮೇಂದ್ರ ಪ್ರಧಾನ್ ಅವರು ಪ್ರಸ್ತುತ ಕೇಂದ್ರ ಶಿಕ್ಷಣ ಮಂತ್ರಿಯಾಗಿದ್ದಾರೆ. ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದ ಕೆ.ಅಣ್ಣಾಮಲೈ ಅವರು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟನೆಯ ಹಿರಿಯ ವ್ಯಕ್ತಿಯಾಗಿರುವ ಪ್ರಧಾನ್ ಅವರು ಈ ಹಿಂದೆ ಹಲವು ಚುನಾವಣೆಗಳನ್ನು ನಿಭಾಯಿಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com