ಸುಮಲತಾ ಅಂಬರೀಷ್ ಅವರಿಂದ ದೂರವಿರಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷರು ಹೇಳುತ್ತಿದ್ದಾರೆ: ಬಿಜೆಪಿ ನಾಯಕ ಸಚ್ಚಿದಾನಂದ ಆರೋಪ

ಮಂಡ್ಯ ಕ್ಷೇತ್ರದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅವರಿಂದ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ ಡಿ ಗಂಗಾಧರ್ ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಸಚ್ಚಿದಾನಂದ ಟೀಕಿಸಿದ್ದಾರೆ.
ಸುಮಲತಾ ಅಂಬರೀಷ್(ಸಂಗ್ರಹ ಚಿತ್ರ)
ಸುಮಲತಾ ಅಂಬರೀಷ್(ಸಂಗ್ರಹ ಚಿತ್ರ)
Updated on

ಮೈಸೂರು: ಮಂಡ್ಯ ಕ್ಷೇತ್ರದ ಸ್ವತಂತ್ರ ಸಂಸದೆ ಸುಮಲತಾ ಅಂಬರೀಶ್ ಅವರಿಂದ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ ಡಿ ಗಂಗಾಧರ್ ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಸಚ್ಚಿದಾನಂದ ಟೀಕಿಸಿದ್ದಾರೆ.

ನಿನ್ನೆ ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚ್ಚಿದಾನಂದ, ನಟ, ರಾಜಕಾರಣಿ ಅಂಬರೀಷ್ ಅವರನ್ನು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿ ಎರಡು ಬಾರಿ ಎಂಎಲ್‌ಸಿ ಟಿಕೆಟ್ ನೀಡಿದ್ದಕ್ಕೆ ಗಂಗಾಧರ್ ಅವರು ಕೃತಜ್ಞರಾಗಿರಬೇಕು, ಅದು ಬಿಟ್ಟು ಇಂದು ಸುಮಲತಾ ಅವರಿಂದ ಅಂತರ ಕಾಯ್ದುಕೊಳ್ಳಿ ಎನ್ನುತ್ತಿದ್ದಾರೆ ಎಂದು ಟೀಕಿಸಿದರು.

ಗಂಗಾಧರ್ ಅವರು ಅಂಬರೀಶ್ ಕುಟುಂಬದಿಂದ ಸಾಕಷ್ಟು ಲಾಭ ಪಡೆದಿದ್ದಾರೆ. ಈಗ ಕಾಂಗ್ರೆಸ್ಸಿಗರು ಸುಮಲತಾ ಅವರನ್ನು ದೂರವಿಡಲು ಬಯಸುತ್ತಿದ್ದಾರೆ. ಜೆಡಿಎಸ್‌ಗೆ ಸ್ಥಾನವನ್ನು ಬಿಟ್ಟುಕೊಡುವ ಬದಲು ಲೋಕಸಭೆಯಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬದ್ಧತೆಯನ್ನು ಕಾಂಗ್ರೆಸ್ ಏಕೆ ಪ್ರದರ್ಶಿಸಲಿಲ್ಲ ಎಂದು ಪ್ರಶ್ನಿಸಿದರು. 

ಸಚ್ಚಿದಾನಂದ ಅವರು ಸುಮಲತಾ ಅವರಿಗೆ ಬಿಜೆಪಿ ಸೇರಿ ಶ್ರೀರಂಗಪಟ್ಟಣದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿದರು. ಅವರ ಗೆಲುವಿಗೆ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ನಾನು ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ಕೂಡ ಹೇಳಿದರು. 

ಪಕ್ಷದ ಮುಖಂಡರು ಈಗಾಗಲೇ ಅವರನ್ನು ಪಕ್ಷಕ್ಕೆ ಆಹ್ವಾನಿಸಿದ್ದಾರೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗರೊಂದಿಗೆ ಸಮಾಲೋಚಿಸಿ ಸುಮಲತಾ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com