ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ
ರಾಜಕೀಯ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿಬಿಟ್ಟಿದೆ: ಸಿದ್ದರಾಮಯ್ಯ ಆರೋಪ
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ನಿನ್ನೆ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಡಿಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ನಿನ್ನೆ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಡಿಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿವೆ. ಕೋಮುವಾದ ಹುಟ್ಟಿರುವುದೇ ಮಂಗಳೂರು, ದಕ್ಷಿಣ ಕನ್ನಡದಿಂದ. ಕೋಮುವಾದ ಬೆಳೆಸಲು ಮಂಗಳೂರನ್ನು ಪ್ರಯೋಗಾಲಯ ರೀತಿ ಬಳಸಿಕೊಳ್ಳಲಾಗುತ್ತಿದೆ, ಇವರ ಬಂಡವಾಳವೇ ಅದು ಎಂದು ಬಿಜೆಪಿ ವಿರುದ್ಧ ಅವರು ಆರೋಪಿಸಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ