ಸ್ಯಾಂಟ್ರೋ ರವಿ ವಿರುದ್ಧ ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ- ಯಡಿಯೂರಪ್ಪ

ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ವಿಚಾರದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಮಗ್ರ ತನಿಖೆ ನಂತರ ಸತ್ಯಾಸತ್ಯತೆ ಹೊರಗೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ವಿಚಾರದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಸಮಗ್ರ ತನಿಖೆ ನಂತರ ಸತ್ಯಾಸತ್ಯತೆ ಹೊರಗೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ಸ್ಯಾಂಟ್ರೋ ರವಿ ವಿರುದ್ಧ ಕಠಿಣ ಕ್ರಮ ಕೈಗೊಂಡು ತಕ್ಕ ಪಾಠ ಕಲಿಸುತ್ತೇವೆ ಎಂದರು. ಸಂಪುಟ ವಿಸ್ತರಣೆಗೆ ಕೇಂದ್ರದ ನಾಯಕರ ಸೂಚನೆ ಎದುರು ನೋಡುತ್ತಿದ್ದೇವೆ, ಭರ್ತಿ ಮಾಡುವ ಸ್ಥಾನಗಳ ಬಗ್ಗೆಯೂ ತಿಳಿದಿಲ್ಲ. ಕೆಎಸ್ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದ ಎಸ್ ಸಿ, ಎಸ್ ಟಿ ಐಕ್ಯತಾ ಸಮಾವೇಶ ಕುರಿತು ಮಾತನಾಡಿದ ಅವರು, ಮೀಸಲಾತಿ ಬಗ್ಗೆ ತಿರುಚಿ ಕಾಂಗ್ರೆಸ್ಸಿಗರು ಮನಬಂದಂತೆ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com