ಸ್ಯಾಂಟ್ರೋ ರವಿ ಸರ್ಕಾರದ 'ಚೀಫ್ ಬ್ರೋಕರ್': ಕಾಂಗ್ರೆಸ್

ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ವಾಗ್ದಾಳಿ ಮುಂದುವರಿಸಿದ್ದು, ‘ಸ್ಯಾಂತ್ರೋ’ ರವಿ ವಿರುದ್ಧದ ಆರೋಪಗಳ ಕುರಿತು ಪೊಲೀಸರು ಸೂಕ್ತವಾಗಿ ತನಿಖೆ ನಡೆಸುತ್ತಾರೆಂಯೇ ಎಂದು ಪ್ರಶ್ನಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ವಾಗ್ದಾಳಿ ಮುಂದುವರಿಸಿದ್ದು, ‘ಸ್ಯಾಂತ್ರೋ’ ರವಿ ವಿರುದ್ಧದ ಆರೋಪಗಳ ಕುರಿತು ಪೊಲೀಸರು ಸೂಕ್ತವಾಗಿ ತನಿಖೆ ನಡೆಸುತ್ತಾರೆಂಯೇ ಎಂದು ಪ್ರಶ್ನಿಸಿವೆ.

ಜೆಡಿಎಸ್‌ನ ಹಿರಿಯ ಮುಖಂಡ ಎಚ್‌ಡಿ ಕುಮಾರಸ್ವಾಮಿ ಮಾತನಾಡಿ, ಹಲವು ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ರವಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. "ಪೊಲೀಸರಿಂದ ನ್ಯಾಯಯುತ ತನಿಖೆಯನ್ನು ಯಾರಾದರೂ ಹೇಗೆ ನಿರೀಕ್ಷಿಸಬಹುದೇ? ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆದರೆ ಸತ್ಯಾಂಶ ಹೊರಬೀಳಲಿದೆ' ಎಂದು ಹೇಳಿದರು.

ಈ ಪ್ರಕರಣವು ಭಯೋತ್ಪಾದನೆ ಪ್ರಕರಣದಂತೆಯೇ ಭಯಾನಕವಾಗಿದ್ದು, ತನಿಖೆಯನ್ನು ಹೈಕೋರ್ಟ್ ನ್ಯಾಯಾಧೀಶರು ಮೇಲ್ವಿಚಾರಣೆ ಮಾಡಬೇಕು. ರವಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನ ಕುಮಾರ ಕೃಪಾ ಸರ್ಕಾರಿ ಅತಿಥಿ ಗೃಹದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ರವಿಯನ್ನು ಬಂಧಿಸುವಲ್ಲಿ ವಿಫಲವಾದ ಬಗ್ಗೆ ಕಾಂಗ್ರೆಸ್ ಸಾಮಾಜಿಕ ಮಾಧ್ಯಮಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸ್ಯಾಂಟ್ರೋ ರವಿ ಸರ್ಕಾರದ 'ಚೀಫ್ ಬ್ರೋಕರ್ ಎಂದು ಕರೆದಿದೆ.

ಪೊಲೀಸರು ನ್ಯಾಯಯುತ ತನಿಖೆ ನಡೆಸಿದರೆ, ಸಿಎಂ ಮತ್ತು ಅನೇಕ ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಇದರಿಂದ ಸರ್ಕಾರ ಪತನವಾಗಲಿದೆ. ರವಿ ಅವರ ಬಳಿ ಸರ್ಕಾರದ ಭ್ರಷ್ಟಾಚಾರದ ಎಲ್ಲಾ ವಿವರಗಳಿವೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com