social_icon

ಕಾಂಗ್ರೆಸ್ ಸುಳ್ಳು ಭರವಸೆಗಳ ಬಗ್ಗೆ ಮನೆಮನೆಗೆ ತೆರಳಿ ಮಾಹಿತಿ ನೀಡುತ್ತೇವೆ: ಬಿಜೆಪಿ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ-ವಾದ್ರಾ ಗೃಹ ಲಕ್ಷ್ಮಿ ಯೋಜನೆಯಡಿ ಕುಟುಂಬದ ಒಬ್ಬ ಮಹಿಳೆಗೆ ಮಾಸಿಕ 2,000 ರೂಪಾಯಿ ನೀಡುವ ಕಾಂಗ್ರೆಸ್ ಯೋಜನೆಯನ್ನು ನಾ ನಾಯಕಿ ಸಮಾವೇಶದಲ್ಲಿ ಅನಾವರಣಗೊಳಿಸಿದ್ದು, ಕಾಂಗ್ರೆಸ್ ಪಕ್ಷದ ಈ ಯೋಜನೆಯನ್ನು ರಾಜ್ಯ ಬಿಜೆಪಿ ಟೊಳ್ಳು ಭರವಸೆಯೆಂದು ಟೀಕೆ ಮಾಡಿದೆ.

Published: 18th January 2023 08:34 AM  |   Last Updated: 18th January 2023 04:49 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಮೈಸೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ-ವಾದ್ರಾ ಗೃಹ ಲಕ್ಷ್ಮಿ ಯೋಜನೆಯಡಿ ಕುಟುಂಬದ ಒಬ್ಬ ಮಹಿಳೆಗೆ ಮಾಸಿಕ 2,000 ರೂಪಾಯಿ ನೀಡುವ ಕಾಂಗ್ರೆಸ್ ಯೋಜನೆಯನ್ನು ನಾ ನಾಯಕಿ ಸಮಾವೇಶದಲ್ಲಿ ಅನಾವರಣಗೊಳಿಸಿದ್ದು, ಕಾಂಗ್ರೆಸ್ ಪಕ್ಷದ ಈ ಯೋಜನೆಯನ್ನು ರಾಜ್ಯ ಬಿಜೆಪಿ ಟೊಳ್ಳು ಭರವಸೆಯೆಂದು ಟೀಕೆ ಮಾಡಿದೆ.
 
ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ ಅವಾಸ್ತವಿಕ ಭರವಸೆಗಳ ಬಗ್ಗೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುತ್ತಿರುವ ಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮನೆ ಮನೆಗೆ ತೆರಳಿ ಜನರಿಗೆ ಮಾಹಿತಿ ನೀಡುತ್ತೇವೆಂದು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಹೇಳಿದ್ದಾರೆ.  

ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲಾ ಬಿಜೆಪಿ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: 2023ರ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್‌ಗೆ 130 ಸ್ಥಾನ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್‌ನ ಘೋಷಣೆಯು ಮಹಿಳೆಯರಿಗೆ ಮಾಡುತ್ತಿರುವ "ವಂಚನೆ"ಯಾಗಿದೆ ಮತ್ತು ಇದು ಚುನಾವಣಾ ಗಿಮಿಕ್ ಹೊರತು ಬೇರೇನೂ ಅಲ್ಲ ಎಂದು ಹೇಳಿದರು. ಅಲ್ಲದೆ, ಬಿಜೆಪಿ ಮಹಿಳೆಯರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿಲ್ಲ ಎಂಬ ಕಾಂಗ್ರೆಸ್ ಮುಖಂಡರ ಆರೋಪದ ವಿರುದ್ಧ ಕಿಡಿಕಾರಿದರು.

“ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಹತಾಶೆಯಲ್ಲಿರುವ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡಲು ಸಿದ್ಧವಾಗಿದೆ. ಪ್ರಿಯಾಂಕ ಗಾಂಧಿಗೆ ಸ್ವಂತ ವರ್ಚಸ್ಸಿಲ್ಲ. ನೆಹರು ಮರಿ ಮೊಮ್ಮಗಳು ಎಂಬುದೊಂದೇ ಗುರುತು. ಕುಟುಂಬದ ಹೆಸರು ಹೇಳಿಕೊಂಡು ತಾವೇ ನಾನು ನಾಯಕಿ ಎಂದು ಹೇಳಿಕೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ನಾಯಕರು ಇವರನ್ನು ನಾಯಕಿ ಎಂದು ಮೆರವಣಿಗೆ ಮಾಡುತ್ತಿರುವುದೇ ಹಾಸ್ಯಾಸ್ಪದ. ಗ್ರಾಪಂ ಸದಸ್ಯೆಯೂ ಅಲ್ಲದ ಪ್ರಿಯಾಂಕ ಗಾಂಧಿ ಹೋದಲ್ಲೆಲ್ಲಾ ಕಾಂಗ್ರೆಸ್‌ ಸೋತಿದೆ. ಕರ್ನಾಟಕದಲ್ಲೂ ಅದು ಪುನರಾರ್ತನೆ ಆಗಲಿದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ನಾಯಕರೊಬ್ಬರು ಮಹಿಳೆಯನ್ನು ದಿಟ್ಟಿಸಿ ನೋಡಿರುವುದು ನಿಜಕ್ಕೂ ದುರದೃಷ್ಟಕರ. ಇದು ಅವರ ಸೋಲಿನೊಂದಿಗೆ ಕೊನೆಗೊಳ್ಳುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: 'ಗೃಹಲಕ್ಷ್ಮಿ' ಯೋಜನೆ ಉದ್ಯೋಗ ಸೃಷ್ಟಿ ಪರಿಕಲ್ಪನೆಗೆ ವಿರುದ್ಧವಾಗಿದೆ, ಕಾಂಗ್ರೆಸ್ ನಿಂದ ಬರೀ ಸುಳ್ಳು ಭರವಸೆ: ಬಿಜೆಪಿ ಟೀಕೆ

ಮಾಜಿ ಪ್ರಧಾನಿ ಇಂದಿರಾಗಾಂಧಿ ಮಹಿಳೆಯರಿಗಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರಲಿಲ್ಲ, ಆದರೆ ತುರ್ತು ಪರಿಸ್ಥಿತಿ ಹೇರಿದರು. ಆದರೆ, ಪ್ರಧಾನಿ ಮೋದಿ ಮಹಿಳೆಯರಿಗೆ ಶೌಚಾಲಯಗಳನ್ನು ನಿರ್ಮಿಸಿದರು. 11 ಮಹಿಳೆಯರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿದರು.

ದೇಶದಲ್ಲಿ ಏಳು ಮಂದಿ ಮಹಿಳಾ ರಾಜ್ಯಪಾಲರಿದ್ದು, ಒಬ್ಬ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿಯನ್ನಾಗಿ ಮಾಡಲಾಗಿದೆ. ಬಿಜೆಪಿ ಸರ್ಕಾರ ಮಹಿಳೆಯರ ಹಿತಾಸಕ್ತಿ ಕಾಪಾಡಲು ತ್ರಿವಳಿ ತಲಾಖ್ ಅನ್ನು ನಿಷೇಧಿಸಿತು ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದರು, ಇದು ಬಿಜೆಪಿ ಮಹಿಳಾ ಪರ ಸರ್ಕಾರ ಎಂದು ಸಾಬೀತುಪಡಿಸುತ್ತದೆ ಎಂದು ತಿಳಿಸಿದರು.


Stay up to date on all the latest ರಾಜಕೀಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • shankar

    amma Mangalamma, mangamma nante maatanadabeda, naa nayaki andre, priyanka ghandi nayaki anta alla, adu strii yojane, maneya hiriya hennu makkalige 2000 sarakaradind kottu avaranna avara maneyalliye naayakiyannagi maadtare, adakke na nayaki anta karyakrama maadiddu,. manganate yeneno maatanadabeda.
    4 months ago reply
flipboard facebook twitter whatsapp