ಯಾವ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರದಿಂದ ನಿಲ್ಲೋದಿಲ್ಲ, ಡ್ರಾಮ ಮಾಡ್ತಿದ್ದಾರೆ: ಬಿ ಎಸ್ ಯಡಿಯೂರಪ್ಪ

'ನಾನೊಂದು ಮಾತು ಹೇಳುತ್ತೀನಿ ಕೇಳಿ, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಚುನಾವಣೆಯಲ್ಲಿ ನಿಲ್ಲುವುದಿಲ್ಲ. ಸುಮ್ನೆ ರಾಜಕೀಯ ಡೊಂಬರಾಟ ಆಡುತ್ತಿದ್ದಾರೆ, ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕುಟುಕಿದ್ದಾರೆ. 
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
Updated on

ಬೆಳಗಾವಿ: 'ನಾನೊಂದು ಮಾತು ಹೇಳುತ್ತೀನಿ ಕೇಳಿ, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಚುನಾವಣೆಯಲ್ಲಿ ನಿಲ್ಲುವುದಿಲ್ಲ. ಸುಮ್ನೆ ರಾಜಕೀಯ ಡೊಂಬರಾಟ ಆಡುತ್ತಿದ್ದಾರೆ, ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕುಟುಕಿದ್ದಾರೆ. 

ಇಂದು ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೋಲಾರದಲ್ಲಿ ನಿಂತರೆ ಸೋಲುವುದು ನಿಶ್ಚಿತ ಅಂತ ಅವರಿಗೂ ಗೊತ್ತಿದೆ. ಹೀಗಾಗಿ ಕೋಲಾರದಲ್ಲಿ ಯಾವ ಕಾರಣಕ್ಕೂ ಅವರು ನಿಲ್ಲಲ್ಲ. ಕೋಲಾರದಲ್ಲಿ ನಾಟಕ, ಡೊಂಬರಾಟ ಎಲ್ಲ ಮುಗಿದ ಮೇಲೆ ತಂತ್ರಗಾರಿಕೆ ಹೆಣೆದು ನೋಡುತ್ತಾರೆ. ನನ್ನ ಪ್ರಕಾರ ಕೊನೆಯಲ್ಲಿ ಮೈಸೂರಿಗೆ ಹೋಗಿ ನಿಲ್ಲುತ್ತಾರೆ ನೋಡುತ್ತಿರಿ ಎಂದರು.

ರಾಜ್ಯದಲ್ಲಿ 140ಕ್ಕೂ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲಲಿದೆ. ನೂರಕ್ಕೆ ನೂರು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಎರಡ್ಮೂರು ದಿನಗಳಲ್ಲಿ ಪ್ರವಾಸ ಆರಂಭಿಸುತ್ತೇನೆ ಎಂದು ಹೇಳಿದರು.

ಅಗತ್ಯಬಿದ್ದರೆ ಅಗ್ರೆಸ್ಸಿವ್ ಆಗಿ ಮಾತನಾಡಲಿ: ಮಾಧುಸ್ವಾಮಿಯವರು ಏನು ಹೇಳಿಕೆ ಕೊಟ್ಟಿದ್ದಾರೆ, ಮಾತನಾಡಿದ್ದಾರೆ ಎಂದು ನನಗೆ ಗೊತ್ತಿಲ್ಲ, ನಾನಂತೂ ಮಾತನಾಡುವುದನ್ನು ಬಿಟ್ಟು ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದೇನೆ, ಅಗತ್ಯಬಿದ್ದರೆ ನಮ್ಮ ಸಚಿವರು ಅಗ್ರೆಸ್ಸಿವ್ ಆಗಿ ಮಾತನಾಡಲಿ ಬಿಡಿ ಎಂದು ಯಡಿಯೂರಪ್ಪ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com