'ಇನ್ನು ಮುಂದೆ ಸಾರ್ವಜನಿಕವಾಗಿ ಯಡಿಯೂರಪ್ಪನವರ ವಿರುದ್ಧ ಮಾತನಾಡುವುದಿಲ್ಲ': ಬಸನಗೌಡ ಪಾಟೀಲ್ ಯತ್ನಾಳ್
ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕ ಲಿಂಗಾಯತ ಮುಖಂಡ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪದೇ ಪದೇ ಮಾತನಾಡಿ ಶಾಸಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಸುದ್ದಿಯಾಗುತ್ತಾರೆ.
Published: 27th January 2023 02:58 PM | Last Updated: 27th January 2023 02:58 PM | A+A A-

ಬಸನಗೌಡ ಪಾಟೀಲ್ ಯತ್ನಾಳ್
ವಿಜಯಪುರ: ಕರ್ನಾಟಕದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕ ಲಿಂಗಾಯತ ಮುಖಂಡ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪದೇ ಪದೇ ಮಾತನಾಡಿ ಶಾಸಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಸುದ್ದಿಯಾಗುತ್ತಾರೆ.
ಚುನಾವಣೆಯ ಹೊಸ್ತಿಲಿನಲ್ಲಿರುವ ಹೊತ್ತಿನಲ್ಲಿ ಯಡಿಯೂರಪ್ಪ ವಿರುದ್ಧ ಮಾತನಾಡಬೇಡಿ ಎಂದು ಬಿಜೆಪಿ ಹೈಕಮಾಂಡ್ ಹೇಳಿದೆ ಎಂದು ಇದೀಗ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ, ಇನ್ನು ಮುಂದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಾರ್ವಜನಿಕವಾಗಿ ಯಾವುದೇ ಟೀಕೆಗಳನ್ನು ಮಾಡುವುದಿಲ್ಲ, ಅವರ ಬಗ್ಗೆ ಗೌರವವಿದ ಎಂದು ಹೇಳಿದ್ದಾರೆ.
ಕ್ಷುಲ್ಲಕ ವಿಷಯಗಳಿಗೆ ಜನರಿಗೆ ಮತ್ತು ಮಾಧ್ಯಮಗಳಿಗೆ ಯಡಿಯೂರಪ್ಪನವರ ವಿರುದ್ಧ ಪ್ರತಿಕ್ರಿಯೆ ನೀಡಬೇಡಿ ಎಂದು ನನಗೆ ಹೇಳಿದ್ದಾರೆ. ನೀವು ಸ್ವಲ್ಪ ಗೌರವ ಕೊಡಿ, ನಿಮ್ಮ ಬಗ್ಗೆ ನಮಗೆ ತಿಳಿದಿದೆ, ಒಳ್ಳೆಯದು ನಡೆಯುತ್ತದೆ, ಯಡಿಯೂರಪ್ಪ ವಿರುದ್ಧ ಮಾತನಾಡಬೇಡಿ ಎಂದು ಅವರು ನನಗೆ ಹೇಳಿದ್ದಾರೆ. ಅವರು ಹಿರಿಯ ನಾಯಕರಾಗಿರುವುದರಿಂದ ನಾನು ಹೈಕಮಾಂಡ್ ಮಾತಿಗೆ ಮನ್ನಣೆ ನೀಡುತ್ತೇನೆ ಎಂದು ಯತ್ನಾಳ್ ಹೇಳಿದ್ದಾರೆ.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ನೀಡಿದಾಗ ನಾನು ಮೃದುವಾಗಿರಬೇಕು ತಾನೇ, ನಾನು ಯಾವಾಗಲೂ ಕೋಪಗೊಂಡಿರಲು ಸಾಧ್ಯವೇ ಎಂದು ಕೇಳಿದ್ದಾರೆ.
ಯಡಿಯೂರಪ್ಪ ಅವರೊಂದಿಗೆ ನಾನು ರಾಜಿ ಮಾಡಿಕೊಂಡಿದ್ದೇನೆ ಎಂದು ಹೇಳಲು, ನಮ್ಮ ನಡುವೆ ಯಾವುದೇ ಆಸ್ತಿ ವಿವಾದ ಇರಲಿಲ್ಲ, ಕೆಲವು ರಾಜಕೀಯ ಜಗಳಗಳು ಇದ್ದವು, ಈಗ ಅದನ್ನು ನಿಲ್ಲಿಸಿದ್ದೇನೆ, ಯಡಿಯೂರಪ್ಪನವರ ಬಗ್ಗೆ ಇಲ್ಲಿ ಕೇಳಬೇಡಿ ಎಂದು ನಾನು ಮಾಧ್ಯಮಗಳಲ್ಲಿ ವಿನಂತಿಸುತ್ತೇನೆ. ಅವರ ಬಗ್ಗೆ ತುಂಬಾ ಗೌರವವಿದೆ, ನಾನು ಅವರ ಬಗ್ಗೆ ಏನನ್ನೂ ಹೇಳುವುದಿಲ್ಲ ಎಂದರು.
ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಅವರು, ಯಡಿಯೂರಪ್ಪ, ಅವರ ಪುತ್ರ ಮತ್ತು ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಇತರ ಕುಟುಂಬ ಸದಸ್ಯರ ವಿರುದ್ಧ ಭ್ರಷ್ಟಾಚಾರದ ಆರೋಪವನ್ನೂ ಮಾಡಿದ್ದರು. ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ನಂತರವೂ ಯಡಿಯೂರಪ್ಪ ಮತ್ತು ಅವರ ಪುತ್ರನ ವಿರುದ್ಧ ಬಹಿರಂಗವಾಗಿ ಟೀಕೆಗಳನ್ನು ಮಾಡುತ್ತಲೇ ಇದ್ದರು.
ಯಡಿಯೂರಪ್ಪ ಮತ್ತು ಅವರ ಸರ್ಕಾರವನ್ನು ಪದೇ ಪದೇ ಟೀಕಿಸಿದ್ದಕ್ಕಾಗಿ ಬಿಜಾಪುರ ನಗರ ಶಾಸಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಈ ಹಿಂದೆ ಪಕ್ಷ ಶೋಕಾಸ್ ನೊಟೀಸ್ ನೀಡಿತ್ತು.