social_icon

ಜನಸಾಮಾನ್ಯ, ಕಾರ್ಯಕರ್ತರನ್ನು ನಿಲ್ಲಿಸ್ತೀವಿ ಅನ್ನೋ ಹೇಳಿಕೆ ಬಿಟ್ಟುಬಿಡಿ; ಹಾಸನ ಟಿಕೆಟ್ ಬಗ್ಗೆ ಮಾತನಾಡಲು ರೇವಣ್ಣ ಬಿಟ್ಟರೆ ಯಾರಿಗೂ ಅವಕಾಶವಿಲ್ಲ: ಎಚ್ ಡಿಕೆಗೆ ಸೂರಜ್ ಟಾಂಗ್

ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ ಹೇಳಿದ್ದಾರೆ.

Published: 28th January 2023 02:01 PM  |   Last Updated: 28th January 2023 03:08 PM   |  A+A-


Suraj Revanna

ಸೂರಜ್ ರೇವಣ್ಣ

Online Desk

ಹಾಸನ: ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ ಹೇಳಿದ್ದಾರೆ.

ಅರಕಲಗೂಡು ತಾಲ್ಲೂಕು ಹರದೂರು ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಜೆಡಿಎಸ್​ನ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ನಮ್ಮತಾಯಿಗೆ ಟಿಕೆಟ್ ಕೊಡಬೇಕು, ಇವತ್ತಿನ ಲೆಕ್ಕಾಚಾರ ನೋಡಿದರೆ ಭವಾನಿ ರೇವಣ್ಣ ಅಭ್ಯರ್ಥಿ ಆದರೆ ಗೆಲುವು ಖಚಿತ. ಇದನ್ನು ಬರೆದಿಟ್ಟುಕೊಳ್ಳಿ ಬೇಕಾದರೆ. ಇದನ್ನು ಬಿಟ್ಟು ಬೇರೆ ಜನಸಾಮಾನ್ಯರನ್ನು, ಕಾರ್ಯಕರ್ತರನ್ನು ನಿಲ್ಲಿಸುತ್ತೇವೆ ಎನ್ನುವ ಹೇಳಿಕೆಗಳನ್ನು ಬಿಟ್ಟುಬಿಡಬೇಕು. ರೇವಣ್ಣ ಸಾಹೇಬರಂತೆ ಹಾಸನ ಜಿಲ್ಲೆಯನ್ನು ಅರಿತಿರುವ ಮತ್ತೊಬ್ಬ ವ್ಯಕ್ತಿ ಈ‌ ಭೂಮಿಯಲ್ಲಿ ಇಲ್ಲವೇ ಇಲ್ಲ. ಅವರು ಇಡೀ ಜಿಲ್ಲೆಯನ್ನು ಸಮರ್ಪಕವಾಗಿ ನಿಭಾಯಿಸಿಕೊಂಡು ಬಂದಿದ್ದಾರೆ. ಹದಿನೈದು ವರ್ಷದಿಂದ ಸತತವಾಗಿ ಆರರಿಂದ ಏಳು ಜನ ಶಾಸಕರನ್ನು ಆಯ್ಕೆ ಮಾಡಿ ಕಳಿಸಿದ್ದಾರೆ. ಇದು ರೇವಣ್ಣ ಅವರ ಸ್ವಂತ ಪ್ರಯತ್ನ. ಅವರನ್ನು ಬಿಟ್ಟರೆ ಇನ್ಯಾರಿಗೂ ಈ ಜಿಲ್ಲೆಯಲ್ಲಿ ಟಿಕೆಟ್ ಬಗ್ಗೆ ಮಾತನಾಡಲು ಅವಕಾಶವಿಲ್ಲ’ ಎಂದು ಪರೋಕ್ಷವಾಗಿ ಎಚ್​.ಡಿ.ಕುಮಾರಸ್ವಾಮಿ ಅವರ ಬಗ್ಗೆ ವ್ಯಂಗ್ಯವಾಡಿದರು.

‘ಮೊದಲಿನಿಂದಲೂ ನಮ್ಮ ತಾತ (ಎಚ್​.ಡಿ.ದೇವೇಗೌಡ) ಈ ಜಿಲ್ಲೆಯ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಯಾಗಬೇಕು ಎಂಬುದನ್ನು ನಿರ್ಧರಿಸುತ್ತಿದ್ದರು. ಈಗ ನನ್ನ ಪರಿಸ್ಥಿತಿ ತಗೊಳಿ. ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ಮಾತುಗಳಿದ್ದವು. ಆದರೆ ದೇವೇಗೌಡರು ಸೂರಜ್‌ರೇವಣ್ಣ ಅಭ್ಯರ್ಥಿಯಾಗಬೇಕು ಎಂದು ತೀರ್ಮಾನಿಸಿದರುಎಂದು ಸ್ಮರಿಸಿದರು.

ಇದನ್ನೂ ಓದಿ: ಕ್ಷೇತ್ರದಲ್ಲಿ ಸಮರ್ಥ ಅಭ್ಯರ್ಥಿ ಇದ್ದಾಗ ಕುಟುಂಬದವರನ್ನು ಸ್ಪರ್ಧೆಗೆ ಇಳಿಸಲ್ಲ-ಎಚ್.ಡಿಕೆ: ದೊಡ್ಡಗೌಡರ ಮನೆಯಲ್ಲಿ ತಾರಕಕ್ಕೇರಿದ ಟಿಕೆಟ್ ಫೈಟ್!

‘ಈಗ ಇಲ್ಲಿನ ರಾಜಕೀಯ ಸನ್ನಿವೇಶ ಬದಲಾಗಿದೆ. ಹಾಲಿ ಶಾಸಕರು ನಮ್ಮ ಕಾರ್ಯಕರ್ತರಿಗೆ ತೊಂದರೆ ಮಾಡುತ್ತಿದ್ದಾರೆ. ನಾವು ಕಾರ್ಯಕರ್ತರನ್ನು ಉಳಿಸಿಕೊಳ್ಳಬೇಕಿದೆ. ಹಾಸನ ತಾಲ್ಲೂಕಿನಲ್ಲಿ ನಮ್ಮ ಪಕ್ಷದ ಶಾಸಕರು ಆರಿಸಿಬರಬೇಕಿದೆ. ಇದು ನಿಮ್ಮ (ರೇವಣ್ಣ) ಕುಟುಂಬದಿಂದ ಮಾತ್ರ ಸಾಧ್ಯ ಎಂದು ಕಾರ್ಯಕರ್ತರು, ಜನರ ಅಪೇಕ್ಷೆಪಟ್ಟಿದ್ದಾರೆ. ನಮ್ಮವರ ವಿರುದ್ಧ ನಮ್ಮ ಸ್ಪರ್ಧೆಯಿಲ್ಲ’ ಎಂದು ಅವರು ತಿಳಿಸಿದರು. ಇನ್ನೂ ಇದೇ ವೇಳೆ ಭವಾನಿ ರೇವಣ್ಣಗೆ ಟಿಕೆಟ್​​​ ನೀಡಬೇಕೆಂದು ಆಗ್ರಹಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


Stay up to date on all the latest ರಾಜಕೀಯ news
Poll
rahul-gandhi

ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಇದರಿಂದ...


Result
ಕಾಂಗ್ರೆಸ್ ಗೆ ಹಿನ್ನಡೆ
ಕಾಂಗ್ರೆಸ್ ಗೆ ಪ್ರಯೋಜನ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Prsad

    ಕುಮಾರಸ್ವಾಮಿ ಮಗ ಮುದ್ದುಮಣಿಗಿಂತ ರೇವಣ್ಣನ ಮಕ್ಕಳು ಬುದ್ದಿವಂತರು.ಅವರಿಗೆ ಜನಸಂಪರ್ಕ ಚೆನ್ನಗಿದೆ
    1 month ago reply
flipboard facebook twitter whatsapp