social_icon

ಒಕ್ಕಲಿಗ ನಾಯಕರ ಜಟಾಪಟಿ: ಮದ್ದೂರಿನಿಂದ ಶಿವಕುಮಾರ್, ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧಿಸುವಂತೆ ಬೆಂಬಲಿಗರ ಮಹದಾಸೆ!

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮಂಡ್ಯ ಜಿಲ್ಲೆಯಿಂದ ಕಣಕ್ಕಿಳಿಸಲು ಅವರ ಬೆಂಬಲಿಗರಲ್ಲಿ ಪೈಪೋಟಿ ಏರ್ಪಟ್ಟಿದೆ.

Published: 30th January 2023 01:25 PM  |   Last Updated: 30th January 2023 05:25 PM   |  A+A-


Dk Shivakumar And H D kumaraswamy

ಡಿ.ಕೆ ಶಿವಕುಮಾರ್ ಮತ್ತು ಎಚ್.ಡಿ ಕುಮಾರಸ್ವಾಮಿ

The New Indian Express

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರನ್ನು ಮಂಡ್ಯ ಜಿಲ್ಲೆಯಿಂದ ಕಣಕ್ಕಿಳಿಸಲು ಅವರ ಬೆಂಬಲಿಗರಲ್ಲಿ ಪೈಪೋಟಿ ಏರ್ಪಟ್ಟಿದೆ.

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾದ  ಇಬ್ಬರು ಪ್ರಮುಖ ಒಕ್ಕಲಿಗ ನಾಯಕರು ಹಳೇ ಮೈಸೂರು ಭಾಗದಲ್ಲಿ ಅದರಲ್ಲೂ ಒಕ್ಕಲಿಗರ ಹೃದಯಭಾಗವಾದ ಮಂಡ್ಯದಿಂದ ಸ್ಪರ್ಧಿಸುವಂತೆ ಒತ್ತಡ ಕೇಳಿ ಬರುತ್ತಿದೆ.

ಒಕ್ಕಲಿಗ ಮತ ಹಂಚಿಕೆಯೇ ಇಲ್ಲಿ ವ್ಯತ್ಯಾಸವಾಗಿರುವುದರಿಂದ ಅವರು ತಮ್ಮ ತಮ್ಮ ರಾಜಕೀಯ ಯಾತ್ರೆಗಳಾದ ಕಾಂಗ್ರೆಸ್‌ನ ಜನಧ್ವನಿ ಮತ್ತು ಜೆಡಿಎಸ್‌ನ ಪಂಚರತ್ನಗಳನ್ನು ಸಕ್ಕರೆ ನಾಡಿಗೆ ಕೊಂಡೊಯ್ಯುತ್ತಿದ್ದಾರೆ.

ಶಿವಕುಮಾರ್ ಅವರ ರಾಜಕೀಯ ಗುರು ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹುಟ್ಟೂರಾದ ಮದ್ದೂರಿನಿಂದ ಸ್ಪರ್ಧಿಸಬೇಕೆಂದು ಡಿಕೆಶಿ ಬೆಂಬಲಿಗರು ಬಯಸಿದ್ದಾರೆ. ಆದರೆ ಕೃಷ್ಣ ಅವರ ಸೋದರಳಿಯ ಗುರುಚರಣ್ ಮದ್ದೂರಿನಿಂದ ಅಭ್ಯರ್ಥಿಯಾಗಲಿದ್ದಾರೆ ಎಂದು ಈ ಹಿಂದೆ ಕಾಂಗ್ರೆಸ್ ಅನೌಪಚಾರಿಕವಾಗಿ ಘೋಷಿಸಿತ್ತು.

ಶಿವಕುಮಾರ್ ಎಂಟ್ರಿಯಿಂದ ಮಂಡ್ಯದಲ್ಲಿ ಜೆಡಿಎಸ್ ಓಟಕ್ಕೆ ಬ್ರೇಕ್ ಬೀಳಲಿದೆ ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಹೆಚ್.ಡಿ.ದೇವೇಗೌಡರ ಆಪ್ತ ಸಂಬಂಧಿ ಡಿ.ಸಿ.ತಮ್ಮಣ್ಣ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಜೆಡಿಎಸ್ ಈಗಾಗಲೇ ಘೋಷಿಸಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಏಳು ಸ್ಥಾನಗಳನ್ನು ಜೆಡಿಎಸ್ ಗೆದ್ದುಕೊಂಡಿತ್ತು. ಆದರೆ ಕೆಲವೇ ವರ್ಷಗಳ ಹಿಂದೆ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿರಲಿಲ್ಲ.  ಆದರೆ ಎಸ್ ಎಂ ಕೃಷ್ಣ ಅವರ ಅವಧಿಯಲ್ಲಿ ಕಾಂಗ್ರೆಸ್ ಏಳರಲ್ಲಿ ಐದರಲ್ಲಿ ಗೆಲುವು ಸಾಧಿಸಿತ್ತು. 2013ರ ಚುನಾವಣೆ ವೇಳೆಯೂ ಮಂಡ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ್ದರಿಂದ ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಯಿತು.

ಇದನ್ನೂ ಓದಿ: ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಮೆರೆಯಲು ಬಿಜೆಪಿ ತಂತ್ರ: ಕೌಂಟರ್ ಕೊಡಲು ಕಾಂಗ್ರೆಸ್ ನಿಂದ ಮೆಗಾ ರ‍್ಯಾಲಿಗೆ ಸಿದ್ಧತೆ

ದೇವೇಗೌಡರ ಕುಟುಂಬದ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯ, ಮೈಸೂರು ಹಾಗೂ ಹಾಸನದಿಂದ ಬಹುಪಾಲು ಸ್ಥಾನಗಳನ್ನು ಗೆಲ್ಲಲು ಶಿವಕುಮಾರ್ ಕೃಷ್ಣನ ಪಾತ್ರವನ್ನು ನಿರ್ವಹಿಸಬೇಕು ಎಂಬುದು ಕಾಂಗ್ರೆಸ್ ಮುಖಂಡರ ಅಪೇಕ್ಷೆಯಾಗಿದೆ.

ಶಿವಕುಮಾರ್ ಮದ್ದೂರಿಗೆ ಎಂಟ್ರಿ ಕೊಡುವುದರಿಂದ ದಿವಂಗತ ನಟ-ರಾಜಕಾರಣಿ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಮತ್ತು ಮಂಡ್ಯ ಸಂಸದೆ ಸುಮಲತಾ ಅವರಿಗೆ ಅಡ್ಡಿಯಾಗಲಿದೆ ಎಂದು ಭಾವಿಸಲಾಗಿದೆ.

ಇದೇ ವೇಳೆ ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧಿಸಬೇಕು ಎಂದು ಜೆಡಿಎಸ್ ಮುಖಂಡರು ಬಯಸಿದ್ದಾರೆ. ಮಾಜಿ ಮುಖ್ಯಮಂತ್ರಿಯನ್ನು ಇಲ್ಲಿಂದ ಸ್ಪರ್ಧಿಸಲು ಆಹ್ವಾನಿಸುವುದಾಗಿ ಪಕ್ಷದ ಹಾಲಿ ಶಾಸಕ ಎಂ.ಶ್ರೀನಿವಾಸ್ ಇತ್ತೀಚೆಗೆ ಘೋಷಿಸಿದ್ದರು. ನಾನು ನನ್ನ ಕ್ಷೇತ್ರವನ್ನು ಬಿಟ್ಟುಕೊಡಲು ಸಿದ್ಧನಿದ್ದೇನೆ ಮತ್ತು ಕುಮಾರಸ್ವಾಮಿ ಪರ ಪ್ರಚಾರ ಮಾಡುತ್ತೇನೆ ಎಂದಿದ್ದರು.

ನಾನು ಇಲ್ಲಿ 25 ಸಾವಿರ ಮತಗಳಿಂದ ಗೆಲ್ಲುತ್ತೇನೆ, ಕುಮಾರಸ್ವಾಮಿ ಅವರು ಹೆಚ್ಚಿನ ಮತಗಳ ಅಂತರದಿಂದ ಮನೆಗೆ ಲಗ್ಗೆ ಇಡಲಿದ್ದಾರೆ ಎಂದರು. ಮೈಸೂರು ಮತ್ತು ಚಾಮರಾಜನಗರದಲ್ಲಿ ಎರಡನೇ ಹಂತದ ಪಂಚರತ್ನ ಯಾತ್ರೆಯಲ್ಲಿ ಕುಮಾರಸ್ವಾಮಿಯವರ ಪ್ರತಿಕ್ರಿಯೆಗಾಗಿ ಪ್ರಾದೇಶಿಕ ಪಕ್ಷಗಳ ನಾಯಕರು ಈಗ ಕುತೂಹಲದಿಂದ ಕಾಯುತ್ತಿದ್ದಾರೆ.


Stay up to date on all the latest ರಾಜಕೀಯ news
Poll
rahul-gandhi

ಮಾನಹಾನಿ ಪ್ರಕರಣದಲ್ಲಿ ಜೈಲು ಶಿಕ್ಷೆ; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಇದರಿಂದ...


Result
ಕಾಂಗ್ರೆಸ್ ಗೆ ಹಿನ್ನಡೆ
ಕಾಂಗ್ರೆಸ್ ಗೆ ಪ್ರಯೋಜನ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp