social_icon

ವಿಪಕ್ಷ ನಾಯಕನ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ತೀವ್ರ ಪೈಪೋಟಿ; ಬಿಎಸ್'ವೈ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರುಗುತ್ತಾರೆಂಬ ಚರ್ಚೆ ಜೋರಾಗಿದೆ.

Published: 02nd June 2023 11:50 AM  |   Last Updated: 02nd June 2023 08:24 PM   |  A+A-


Bommai meets former CM and senior BJP leader BS Yediyurappa.

ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸುತ್ತಿರುವ ಮಾಜಿ ಸಿಎಂ ಬೊಮ್ಮಾಯಿ.

Posted By : Manjula VN
Source : Online Desk

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರುಗುತ್ತಾರೆಂಬ ಚರ್ಚೆ ಜೋರಾಗಿದೆ. ಅಲ್ಲದೇ ವಿಪಕ್ಷ ನಾಯಕನ ಸ್ಥಾನ ಪಡೆಯಲು ರಾಜ್ಯ ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವುದೂ ಕಂಡುಬಂದಿದೆ.

ಈ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ವಿಪಕ್ಷ ನಾಯಕ ಸ್ಥಾನ ಸೇರಿದಂತೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರು ಬಿಜೆಪಿ ಶಾಸಕರ ಜೊತೆ ಅನೌಪಚಾರಿಕ ಸಭೆ ನಡೆಸಿ ಅಭಿಪ್ರಾಯವನ್ನು ಕಲೆಹಾಕುತ್ತಿದ್ದಾರೆ. ಆದರೆ, ಅಂತಿಮ ನಿರ್ಧಾರವನ್ನು ಜುಲೈನಲ್ಲಿ ನಡೆಯುವ ಬಜೆಟ್‌ ಅಧಿವೇಶನಕ್ಕೂ ಮುನ್ನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಆದರೆ, ವಿಪಕ್ಷ ನಾಯಕರ ಸ್ಥಾನಕ್ಕೆ ಪೈಪೋಟಿ ಹೆಚ್ಚಿರುವುದು ಬಿಜೆಪಿ ವರಿಷ್ಠರ ತಲೆನೋವಿಗೆ ಕಾರಣವಾಗಿದೆ.

ಇದನ್ನೂ ಓದಿ: ವಿರೋಧ ಪಕ್ಷದ ನಾಯಕ ಯಾರು?; ಕರ್ನಾಟಕದಲ್ಲಿ ಬಿಜೆಪಿಯನ್ನು ಕಾಡುತ್ತಿದೆ ಇದೊಂದು ಪ್ರಶ್ನೆ!

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಆರ್‌ ಅಶೋಕ್‌, ಮಾಜಿ ಸಚಿವ ಸುನೀಲ್‌ ಕುಮಾರ್‌ ಹಾಗೂ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿಪಕ್ಷ ನಾಯಕ ಸ್ಥಾನದ ರೇಸ್‌ನಲ್ಲಿ ಮುಂದೆ ಇದ್ದಾರೆ.

ವಿಪಕ್ಷ ನಾಯಕನ ಸ್ಥಾನ ನಿರ್ಣಾಯಕ ಆಗಿರುವುದರಿಂದ ಬಿಜೆಪಿ ಅಳೆದು ತೂಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ. ಎಕೆಂದರೆ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳು ಹಾಗೂ ತಪ್ಪು ಹೆಜ್ಜೆಗಳನ್ನು ಜನರ ಮುಂದಿಟ್ಟು ಪ್ರತಿಯೊಂದು ಸಿಕ್ಕ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಲು ವಿಪಕ್ಷ ನಾಯಕನ ಸ್ಥಾನ ಬಿಜೆಪಿಗೆ ಪ್ರಮುಖವಾಗಿದೆ.

ವಿಪಕ್ಷ ದಾಳಿಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್‌ನಲ್ಲಿ ಹಲವು ಹಿರಿಯ ಶಾಸಕರಿರುವ ಕಾರಣಕ್ಕಾಗಿ ಬಿಜೆಪಿಯಲ್ಲಿಯೂ ಅಂತಹದ್ದೇ ನಾಯಕನನ್ನು ಆಯ್ಕೆ ಮಾಡಲು ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


Stay up to date on all the latest ರಾಜಕೀಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp