social_icon

ಸರಣಿ ಸಭೆಗಳ ಬಳಿಕವೂ ಇನ್ನೂ ಅಂತಿಮಗೊಂಡಿಲ್ಲ ವಿಪಕ್ಷ ನಾಯಕನ ಆಯ್ಕೆ; ಸೋಲಿಗೆ 3 ಕಾರಣಗಳ ಕಂಡುಕೊಂಡ ಬಿಜೆಪಿ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಆತ್ಮಾವಲೋಕನ ಸಭೆ ನಡೆಸಿರುವ ಬಿಜೆಪಿ, ಸೋಲಿಗೆ 3 ಕಾರಣಗಳನ್ನು ಕಂಡುಕೊಂಡಿದೆ. ಆದರೆ, ವಿಪಕ್ಷ ನಾಯಕನ ಆಯ್ಕೆ ಮಾತ್ರ ಇನ್ನೂ ಅಂತಿಮಗೊಂಡಿಲ್ಲ.

Published: 09th June 2023 09:51 AM  |   Last Updated: 09th June 2023 06:35 PM   |  A+A-


​ (From left) Ex-minister KS Eshwarappa, BJP state in-charge Arun Singh, ex-CMs BSY, Basavaraj Bommai, Sadananda Gowda, and state chief Nalin Kumar Kateel during a meet .

ನಗರದಲ್ಲಿ ನಡೆಸ ಸಭೆಯಲ್ಲಿ ಬಿಜೆಪಿ ನಾಯಕರು.

Posted By : Manjula VN
Source : The New Indian Express

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಆತ್ಮಾವಲೋಕನ ಸಭೆ ನಡೆಸಿರುವ ಬಿಜೆಪಿ, ಸೋಲಿಗೆ 3 ಕಾರಣಗಳನ್ನು ಕಂಡುಕೊಂಡಿದೆ. ಆದರೆ, ವಿಪಕ್ಷ ನಾಯಕನ ಆಯ್ಕೆ ಮಾತ್ರ ಇನ್ನೂ ಅಂತಿಮಗೊಂಡಿಲ್ಲ.

ನಿನ್ನೆಯಷ್ಟೇ ಬಿಜೆಪಿ ಸರಣಿ ಸಭೆ ನಡೆಸಿದತು. ಬೆಳಿಗ್ಗೆ ನೂತನ ಶಾಸಕರೊಂದಿಗೆ ಸಭೆ ನಡೆದರೆ, ಮಧ್ಯಾಹ್ನ ಪರಾಜಿತ ಅಭ್ಯರ್ಥಿಗಳೊಂದಿಗೆ, ನಂತರ ಕೋರ್ ಕಮಿಟಿ ಸಭೆ ನಡೆಯಿತು.

ಮಧ್ಯಾಹ್ನ ಪರಾಜಿತ ಅಭ್ಯರ್ಥಿಗಳ ಸಭೆ ವೇಳೆ ಸೋಲಿನ ಕುರಿತು ಆತ್ಮಾವಲೋಕನ ನಡೆಯಿತು. ಈ ವೇಳೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸೋಲು ಅನುಭವಿಸಲು ರಾಜ್ಯ ನಾಯಕರು, ಸಚಿವರು ಪ್ರಮುಖ ಕಾರಣ ಎಂಬ ಅಭಿಪ್ರಾಯ ವ್ಯಕ್ತವಾಯಿತು ಎಂದು ತಿಳಿದುಬಂದಿದೆ.

ನಮ್ಮ ಮೇಲೆ ಇನ್ನೊಬ್ಬರನ್ನು ತಂದು ಕೂರಿಸಿದ್ದು ಸೋಲಿಗೆ ಕಾರಣವಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಆಯ್ಕೆಗಿಂದು ಬಿಜೆಪಿ ಮಹತ್ವದ ಸಭೆ: ಅಭಿಪ್ರಾಯ ಸಂಗ್ರಹ, ವರಿಷ್ಠರಿಂದ ಅಂತಿಮ ನಿರ್ಧಾರ

ಇನ್ನೂ ಕೆಲವು ಪರಾಜಿತ ನಾಯಕರು ಸರ್ಕಾರ ಇದ್ದಾಗ ಸಚಿವರು ಸ್ಪಂದಿಸದೆ ಇದ್ದದ್ದು, ಕ್ಷೇತ್ರಗಳ ಸಮಸ್ಯೆಗಳಿಗೆ ಸೂಕ್ತ ಮತ್ತು ಅಗತ್ಯವಿದ್ದದಷ್ಟು ಅನುದಾನ ನೀಡದೆ ಇದ್ದದ್ದು ಸೋಲಿಗೆ ಕಾರಣವಾಗಿದೆ ಎಂದು ಸಭೆಯಲ್ಲಿ ನೋವನ್ನು ತೋಡಿಕೊಂಡಿದ್ದಾರೆ.

ಈ ನಡುವೆ ಮಧ್ಯಾಹ್ನ ನಡೆದ ಸೋತ ಅಭ್ಯರ್ಥಿಗಳ ಸಭೆಗೆ ಹಿರಿಯ ಮುಖಂಡರಾದ ವಿ.ಸೋಮಣ್ಣ, ಡಾ.ಕೆ.ಸುಧಾಕರ್, ಜೆ.ಸಿ.ಮಾಧುಸ್ವಾಮಿ ಗೈರು ಹಾಜರಾಗಿರುವುದು ಕುತೂಹಲ ಮೂಡುವಂತೆ ಮಾಡಿದೆ.

ಸುಧಾಕರ್ ಉದ್ದೇಶಪೂರ್ವಕವಾಗಿ ವಿದೇಶ ಪ್ರವಾಸ ಕೈಗೊಂಡಿದ್ದರೆ, ನಾಯಕರ ಮೇಲಿನ ಸಿಟ್ಟಿನಿಂದ ವಿ.ಸೋಮಣ್ಣ ಸಭೆಯಲ್ಲಿ ಭಾಗವಹಿಸಿಲ್ಲ ಎಂದು ತಿಳಿದು ಬಂದಿದೆ.

ಇನ್ನುಳಿದಂತೆ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಬಿ.ಸಿ. ನಾಗೇಶ್, ಬಿ.ಸಿ. ಪಾಟೀಲ್, ಶ್ರೀರಾಮುಲು ಮತ್ತು ಕೆ.ಸಿ. ನಾರಾಯಣ ಗೌಡ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಗಳು ತಿಳಿಸಿವೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ವಿರೋಧ ಪಕ್ಷದ ನಾಯಕ ಯಾರು ಎಂಬ ಬಗ್ಗೆ ಶಾಸಕರಿಂದ ಪ್ರತಿಕ್ರಿಯೆ ಸಂಗ್ರಹಿಸಿದ್ದಾರೆ. ಪರಿಶೀಲನಾ ಸಭೆಯ ನಂತರ ವಿಪಕ್ಷ ನಾಯಕರನ್ನು ಶೀಘ್ರದಲ್ಲೇ ಆಯ್ಕೆ ಮಾಡಲಾಗುವುದು. "ಒಳ ಮೀಸಲಾತಿ, ಜನರು ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳು ಹಾಗೂ ಬಿಜೆಪಿ ಸರ್ಕಾರದ ಬಗೆಗಿನ ನಕಾರಾತ್ಮಕ ಪ್ರಚಾರದಿಂದ ಪಕ್ಷ ಸೋಲು ಕಂಡಿದೆ.

ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ತಂತ್ರ: ರಾಜ್ಯದಾದ್ಯಂತ ಪ್ರವಾಸಕ್ಕೆ ಕಮಲ ಪಾಳಯ ಮುಂದು!

ರಾಜ್ಯದಲ್ಲಿ 1985ರ ಚುನಾವಣೆ ಹೊರತುಪಡಿಸಿ ಬಳಿಕ ಆಡಳಿತ ಪಕ್ಷ ಮತ್ತೆ ಅಧಿಕಾರಕ್ಕೆ ಬಂದ ಉದಾಹಣೆ ಇಲ್ಲ. ಬಿಜೆಪಿ ಎದೆಗುಂದುವ ಪಕ್ಷವಲ್ಲ. 1984ರ ಲೋಕಸಭಾ ಚನಾವಣೆಯಲ್ಲಿ ಕೇವಲ ಎರಡು ಸ್ಥಾನ ಗೆದ್ದಿತ್ತು. ಆದರೆ, ಎದೆಗುಂದದೆ ಪಕ್ಷ ಸಂಘಟನೆ ಮಾಡಲಾಯಿತು. ಈ ಚುನಾವಣೆಯಲ್ಲಿಯೂ ನಮ್ಮ ಪಕ್ಷದ ಮತ ಪ್ರಮಾಣ ಕಡಿಮೆಯಾಗಿಲ್ಲ. ಸ್ಥಾನಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದರು.

ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರಿಗೆ ವಿಶ್ವಾಸ ತುಂಬುವ ಕೆಲಸ ಮಾಡಲಾಗಿದೆ. ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ನಿರ್ಧರಿಸಲಾಗಿದೆ. ಸರ್ಕಾರದ ಒಳ್ಳೆಯ ಕಾರ್ಯಕ್ಕೆ ಸಹಕಾರ ನೀಡಲಾಗುವುದು. ಜನವಿರೋಧಿ ಕಾರ್ಯ ಮುಂದುವರೆಸಿದಾಗ ಮತ್ತು ಹಿಡನ್ ಅಜೆಂಡಾ ಜೊತೆ ರಾಜ್ಯಕ್ಕೆ ಘಾತುಕ ನಿರ್ಣಯ ಕೈಗೊಂಡರೆ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಕೇಂದ್ರ ಸಚಿವರಾದ ಸದಾನಂದಗೌಡ, ಅರುಣ್ ಸಿಂಗ್, ಈಶ್ವರಪ್ಪ ಉಪಸ್ಥಿತರಿದ್ದರು.


Stay up to date on all the latest ರಾಜಕೀಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp