social_icon

ಒಡಿಶಾ ರೈಲು ದುರಂತ: ಪ್ರಧಾನಿಗೆ ಪತ್ರ ಬರೆದಿದ್ದ ಖರ್ಗೆಗೆ ರಾಜ್ಯದ ನಾಲ್ವರು ಬಿಜೆಪಿ ಸಂಸದರಿಂದ ಪತ್ರ

ಇತ್ತೀಚಿಗೆ ಒಡಿಶಾದ ಬಾಲಾಸೋರ್ ನಲ್ಲಿ ಸಂಭವಿಸಿದ ತ್ರಿವಳಿ ರೈಲು ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದ ನಾಲ್ವರು ಸಂಸದರು ಪತ್ರ ಬರೆದಿದ್ದಾರೆ. 

Published: 10th June 2023 12:16 AM  |   Last Updated: 10th June 2023 02:05 PM   |  A+A-


Kharge_Tejasvi1

ಖರ್ಗೆ, ತೇಜಸ್ವಿ ಸೂರ್ಯ

Posted By : Nagaraja AB
Source : ANI

ಬೆಂಗಳೂರು: ಇತ್ತೀಚಿಗೆ ಒಡಿಶಾದ ಬಾಲಾಸೋರ್ ನಲ್ಲಿ ಸಂಭವಿಸಿದ ತ್ರಿವಳಿ ರೈಲು ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದ ನಾಲ್ವರು ಸಂಸದರು ಪತ್ರ ಬರೆದಿದ್ದಾರೆ. 

ರಾಜ್ಯದ ಬಿಜೆಪಿ ಸಂಸದರಾದ ಡಿ.ವಿ. ಸದಾನಂದಗೌಡ, ತೇಜಸ್ವಿ ಸೂರ್ಯ, ಎಸ್ ಮುನಿಸ್ವಾಮಿ ಹಾಗೂ ಪಿ. ಸಿ. ಮೋಹನ್ ಅವರು ಖರ್ಗೆ ಅವರಿಗೆ ಪತ್ರ ಬರೆದಿದ್ದು, ಬಿಜೆಪಿ ಸರ್ಕಾರ ರೈಲ್ವೆಯನ್ನು ನಿರ್ಲಕ್ಷಿಸಿಲ್ಲ, ಕಳೆದ 9 ವರ್ಷಗಳಲ್ಲಿ ಸುಮಾರು 4.58 ಲಕ್ಷ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಸ್ತುತ  ಸುಮಾರು 1.52 ಲಕ್ಷ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹೀಗೆ 10 ವರ್ಷಗಳಲ್ಲಿ 6.1 ಲಕ್ಷಕ್ಕೂ ಹೆಚ್ಚು ಯುವ ಜನತೆಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಇದು ಯುಪಿಎ ಅವಧಿಯಲ್ಲಿ ಮಾಡಿಕೊಳ್ಳಲಾದ 4.11 ಲಕ್ಷಕ್ಕಿಂತ ಶೇ.50 ರಷ್ಟು ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಮಸ್ಯೆ ಸರಿಪಡಿಸಿದ್ದರೆ ತಪ್ಪಿಸಬಹುದಿತ್ತು ಒಡಿಶಾ ದುರಂತ: ಫ್ರೆಬ್ರವರಿಯಲ್ಲೇ ಸಿಗ್ನಲಿಂಗ್ ಸಮಸ್ಯೆ ಬಗ್ಗೆ ರೈಲ್ವೆ ಅಧಿಕಾರಿ ಪತ್ರ!

ಮಾಜಿ ರೈಲ್ವೆ ಸಚಿವರಾಗಿ  2004 ಮತ್ತು 2014 ರ ನಡುವೆ ನೀವು ಕಾರ್ಯ ನಿರ್ವಹಿಸಿದ್ದರಿಂದ ಪರಿಸ್ಥಿತಿ ಕುರಿತು ವಿವೇಚನೆಯುಕ್ತ ಮಾಹಿತಿ ನೀಡುವಿರೆಂದು ನಿರೀಕ್ಷಿಸಿದ್ದೇವು. ಆದರೆ, ನೀವು ಬೇರೆ ರೀತಿಯಲ್ಲಿ ಸಲಹೆ ನೀಡಿದ್ದೀರಿ ಎಂದಿದ್ದಾರೆ.

ಫೆಬ್ರವರಿ 2023 ರಲ್ಲಿ ಕರ್ನಾಟಕದ ಹೊಸದುರ್ಗದ ಬಳಿ ಎರಡು ರೈಲುಗಳು ಒಂದೇ ಮಾರ್ಗದಲ್ಲಿ ಬಂದ ನಂತರ ದೊಡ್ಡ ದುರಂತವನ್ನು ತಪ್ಪಿಸಲಾಯಿತು, ಘಟನೆಯನ್ನು ರೈಲ್ವೆಯು ಕೂಲಂಕಷವಾಗಿ ತನಿಖೆ ಮಾಡಿದೆ ಎಂದು ಸಂಸದರು ಪತ್ರದಲ್ಲಿ ವಿವರಿಸಿದ್ದಾರೆ. 


Stay up to date on all the latest ರಾಜಕೀಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • FLEXI

    ಕರ್ನಾಟಕದ ಯಾವುದೇ ನೀರಾವರಿ ಯೋಜನೆ ಬಗ್ಗೆ ನಮ್ಮ ರಾಜ್ಯದಿಂದ ಆಯ್ಗೆಗೊಂಡ ಸಂಸದರು ಚಕಾರವೆತ್ತದಿದ್ದರು ಮುಂದಿನ ಲೋಕಸಭೆ ಚುನಾವಣೆಗೆ ಪ್ರಧಾನಿಯನ್ನು ಮೆಚ್ಚಿಸಲು ಈ ತರಹದ ಬರಹವನ್ನು ತರಾತುರಿಯಲ್ಲಿ ಬರೆದಿದ್ದಾರೆ.
    3 months ago reply
flipboard facebook twitter whatsapp