ಕಡೂರು ಜೆಡಿಎಸ್ ಅಭ್ಯರ್ಥಿ ಘೋಷಣೆ, ಸಿಎಂ ಧನಂಜಯ್ ಗೆ ಟಿಕೆಟ್

ಈ ಹಿಂದೆ ಜೆಡಿಎಸ್ ನಿಂದ ಕಡೂರು ಶಾಸಕರಾಗಿದ್ದ ವೈಎಸ್ ವಿ ದತ್ತ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಕಡೂರಿನಿಂದ ಸಿಎಂ ಧನಂಜಯ್ ಅವರಿಗೆ ಟಿಕೆಟ್ ನೀಡಲಾಗಿದೆ.
ಜೆಡಿಎಸ್
ಜೆಡಿಎಸ್
Updated on

ಹಾಸನ: ಈ ಹಿಂದೆ ಜೆಡಿಎಸ್ ನಿಂದ ಕಡೂರು ಶಾಸಕರಾಗಿದ್ದ ವೈಎಸ್ ವಿ ದತ್ತ ಅವರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ಮುಂಬರುವ ವಿಧಾನಸಭೆ ಚುನಾವಣೆಗೆ ಕಡೂರಿನಿಂದ ಸಿಎಂ ಧನಂಜಯ್ ಅವರಿಗೆ ಟಿಕೆಟ್ ನೀಡಲಾಗಿದೆ.

ಕರ್ನಾಟಕ ರಾಜ್ಯ ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾಗಿರುವ ಸಿಎಂ ಧನಂಜಯ್ ಅವರನ್ನು ಕಡೂರ್ ಜೆಡಿಎಸ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಎಂಎಲ್​​ಸಿ ಭೋಜೇಗೌಡ ಅವರು ಸೋಮವಾರ ಘೋಷಣೆ ಮಾಡಿದ್ದಾರೆ.

ಇಂದು ಹಾಸನ ಸಂಸದರ ನಿವಾಸದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಕಡೂರು ಜೆಡಿಎಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದ್ದು, ಮಾಜಿ ಸಚಿವ ಎಚ್​ಡಿ ರೇವಣ್ಣ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಕಡೂರು ಕ್ಷೇತ್ರದ ಅಭ್ಯರ್ಥಿ ಬಗ್ಗೆ ಇಂದು ಪ್ರಮುಖರ ಸಭೆ ಕರೆದು ಚರ್ಚೆ ಮಾಡಲಾಗಿದೆ. ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ವರಿಷ್ಠರ ಜೊತೆಗೂ ಚರ್ಚಿಸಲಾಗಿದೆ. ಕುಮಾರಣ್ಣ, ದೇವೇಗೌಡರು, ರಾಜ್ಯ ಅಧ್ಯಕ್ಷರ ಅನುಮತಿ ಪಡೆಯಲಾಗಿದೆ. ಒಮ್ಮತದ ಅಭ್ಯರ್ಥಿಯಾಗಿ ಧನಂಜಯ್ ಅವರ ಹೆಸರನ್ನು ಅಂತಿಮ ಗೊಳಿಸಲಾಗಿದೆ. ಇದಕ್ಕೆ ಎಚ್​ಡಿ ಕುಮಾರಸ್ವಾಮಿ ಅವರು ಸಹ ಅನುಮತಿ ಕೊಟ್ಟಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com