ಪ್ರತಾಪ್ ಸಿಂಹ ಏನು ಸಚಿವರಾ? ಕೇವಲ ಸಂಸದ ಅಷ್ಟೇ: ಸಿದ್ದರಾಮಯ್ಯ

ರಾಜ್ಯ ರಾಜಕಾರಣದಲ್ಲಿ ಮಾರ್ಚ್ 12 ರಂದು ಉದ್ಘಾಟನೆಯಾಗಲಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕ್ರೆಡಿಟ್ ವಾರ್ ಮುಂದುವರಿದಿದ್ದು, ಈ ಸಂಬಂಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ...
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಾರ್ಚ್ 12 ರಂದು ಉದ್ಘಾಟನೆಯಾಗಲಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕ್ರೆಡಿಟ್ ವಾರ್ ಮುಂದುವರಿದಿದ್ದು, ಈ ಸಂಬಂಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಏನು ಸಚಿವರಾ? ಅವರು ಕೇವಲ ಒಬ್ಬ ಸಂಸದ ಅಷ್ಟೇ. ಈ ಹೆದ್ದಾರಿ ಪೂರ್ತಿ ಪ್ರತಾಪ್​ ಸಿಂಹ ಕ್ಷೇತ್ರದಲ್ಲಿ ಬರುತ್ತಾ? ಕಳಸವಾಡಿವರೆಗೆ ಮಾತ್ರ ಪ್ರತಾಪ್ ಸಿಂಹ ಕ್ಷೇತ್ರ ಬರುತ್ತೆ ಅಷ್ಟೇ. ಮಂಡ್ಯ, ರಾಮನಗರ ಜಿಲ್ಲೆಯಲ್ಲೂ ಈ ಹೆದ್ದಾರಿ ಹಾದುಹೋಗುತ್ತದೆ ಎಂದರು.

ನಾನು ಬೆಂಗಳೂರು-ಮೈಸೂರು ಹೆದ್ದಾರಿ ವೀಕ್ಷಿಸಲು ಹೋಗುತ್ತಿಲ್ಲ. ಮಾಜಿ ಸಚಿವ ಎಚ್​.ಸಿ.ಮಹದೇವಪ್ಪ ಅವರು ಹೆದ್ದಾರಿ ವೀಕ್ಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಮಾರ್ಚ್ 12 ರಂದು ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಉದ್ಘಾಟಿಸುವ ಮೊದಲು ಇಂದು ಸಿದ್ದರಾಮಯ್ಯ ಹೆದ್ದಾರಿ ವೀಕ್ಷಣೆ ಮಾಡಲು ಮುಂದಾಗಿದ್ದರು. ಆದರೆ ಎಐಸಿಸಿಯ ಸ್ಕ್ರೀನಿಂಗ್ ಕಮಿಟಿ ಗುರುವಾರ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಹೆದ್ದಾರಿ ವೀಕ್ಷಣೆಯ ಪ್ರವಾಸ ರದ್ದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com