social_icon

ಹಾಸನ: ಮುಂದುವರಿದ ಜೆಡಿಎಸ್ ಟಿಕೆಟ್ ಗೊಂದಲ, ಸದ್ದು ಮಾಡುತ್ತಿದೆ ಹೊಸ ಹೆಸರು

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಗೊಂದಲ ಮುಂದುವರಿದಿದ್ದು, ಇದೀಗ ಕ್ಷೇತ್ರದಲ್ಲಿ ಹೊಸ ಹೆಸರು ಭಾರಿ ಸದ್ದು ಮಾಡುತ್ತಿದೆ.

Published: 14th March 2023 08:58 PM  |   Last Updated: 15th March 2023 06:17 PM   |  A+A-


JDS leader revanna

ಜೆಡಿಎಸ್ ನಾಯಕ ರೇವಣ್ಣ

Posted By : Lingaraj Badiger
Source : The New Indian Express

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಗೊಂದಲ ಮುಂದುವರಿದಿದ್ದು, ಇದೀಗ ಕ್ಷೇತ್ರದಲ್ಲಿ ಹೊಸ ಹೆಸರು ಭಾರಿ ಸದ್ದು ಮಾಡುತ್ತಿದೆ.

ಎಚ್.ಪಿ.ಸ್ವರೂಪ್ ಅವರ ಉಮೇದುವಾರಿಕೆಯನ್ನು ಸರಿದೂಗಿಸಲು ಒಕ್ಕಲಿಗ ಸಮುದಾಯದ ಉಪಜಾತಿಯಾದ ದಾಸವೊಕ್ಕಲಿಗದಿಂದ ಪಕ್ಷದ ಹಿರಿಯ ನಾಯಕ ಕೆ.ಎಂ.ರಾಜೇಗೌಡ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ ಎನ್ನಲಾಗಿದೆ.

ಈಗ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಎಂ.ರಾಜೇಗೌಡ ಅವರ ಬಗ್ಗೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮಾತನಾಡುತ್ತಿದ್ದಾರೆ. ವಾಣಿಜ್ಯ ಸಂಸ್ಥೆಗಳು, ಉದ್ಯಾನವನಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ರಾಜೇಗೌಡ ಬಗ್ಗೆ ಚರ್ಚೆ ನಡೆಯುತ್ತಿದೆ. 

ಹಾಸನದ ಅಭ್ಯರ್ಥಿಯನ್ನು ಅಂತಿಮಗೊಳಿಸಬೇಕಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಬದಲಾದ ಸನ್ನಿವೇಶದಲ್ಲಿ ಕೆ.ಎಂ.ರಾಜೇಗೌಡ ಅವರನ್ನು ಹಾಸನದಿಂದ ಕಣಕ್ಕಿಳಿಸಲು ಮುಂದಾಗಿದ್ದಾರೆ. ಎಚ್.ಡಿ.ರೇವಣ್ಣ ಅವರು ಕೆ.ಎಂ.ರಾಜೇಗೌಡ ಅವರೊಂದಿಗೆ ಈಗಾಗಲೇ ಎರಡು ಬಾರಿ ಗೌಪ್ಯವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ. 

ಇದನ್ನು ಓದಿ: ಹಾಸನ: ಜೆಡಿಎಸ್ ಟಿಕೆಟ್ ಆಕಾಂಕ್ಷಿ ಸ್ವರೂಪ್ ­-ರೇವಣ್ಣ ಮಾತುಕತೆ; ಕುತೂಹಲ ಮೂಡಿಸಿದ ಭೇಟಿ

ಇನ್ನು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಒಪ್ಪಿದ ಕೆ.ಎಂ.ರಾಜೇಗೌಡ ಅವರು ಹಾಸನದಲ್ಲಿ ತಮ್ಮ ಬೆಂಬಲಿಗರೊಂದಿಗೆ ಟೆಂಪಲ್ ರನ್ ಆರಂಭಿಸಿದ್ದಾರೆ. ನೀರುಬಾಗಿಲು ಆಂಜನೇಯ, ಹಾಸನಾಂಬ, ಹಾಸನದ ಸಿದ್ದೇಶ್ವರ ದೇವಸ್ಥಾನ ಹಾಗೂ ಹಾಸನದ ಬೈಲಹಳ್ಳಿಯ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಆರಂಭಿಸಿದ್ದಾರೆ. 

ಎಚ್.ಡಿ.ರೇವಣ್ಣ ಪ್ರಸ್ತಾಪಿಸಿದ ರಾಜೇಗೌಡ ಅವರ ಉಮೇದುವಾರಿಕೆಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಸಿರು ನಿಶಾನೆ ತೋರಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಬಳಿಯೂ ಕೆ.ಎಂ.ರಾಜೇಗೌಡರ ಸಾಧಕ-ಬಾಧಕಗಳ ಬಗ್ಗೆ ಎಚ್.ಡಿ.ರೇವಣ್ಣ ಚರ್ಚೆ ನಡೆಸಿದ್ದಾರೆ. ಈಗಾಗಲೇ ಚುನಾವಣಾ ಪ್ರಚಾರ ಆರಂಭಿಸಿದ್ದ ಪ್ರಬಲ ಟಿಕೆಟ್‌ ಆಕಾಂಕ್ಷಿಗಳಾದ ಭವಾನಿ ರೇವಣ್ಣ ಮತ್ತು ಎಚ್‌ಪಿ ಸ್ವರೂಪ ಗೌಡ ಇಬ್ಬರೂ ಎಚ್‌ಡಿ ಕುಮಾರಸ್ವಾಮಿ ಅವರ ಕಟ್ಟುನಿಟ್ಟಿನ ಸೂಚನೆ ಮೇರೆಗೆ ಪಕ್ಷದ ಕಾರ್ಯಕರ್ತರ ಸಭೆ ಮತ್ತು ಟೆಂಪಲ್ ರನ್ ಅನ್ನು ದಿಢೀರ್ ನಿಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.


Stay up to date on all the latest ರಾಜಕೀಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp