ಹಾವೇರಿ: ಕೃಷಿ ಸಚಿವ ಬಿ ಸಿ ಪಾಟೀಲ್ ರೈತರ ಹೆಸರಿನಲ್ಲಿ ಹಣವನ್ನೂ ಲೂಟಿ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆರೋಪಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಮಂಗಳವಾರ ನಡೆದ ‘ಪ್ರಜಾಧ್ವನಿ’ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಸಿ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದರು.
ಮಾಡಾಳ್ ವಿರೂಪಾಕ್ಷಪ್ಪ (ಬಿಜೆಪಿ ಶಾಸಕ) ಮನೆ ಮೇಲೆ ನಡೆದ ದಾಳಿ ವೇಳೆ ಲೋಕಾಯುಕ್ತ ಪೊಲೀಸರು 8 ಕೋಟಿ ರೂ. ವಶಕ್ಕೆ ಪಡೆದಿದ್ದಾರೆ. ಆದರೆ, ಬಿಸಿ ಪಾಟೀಲ್ ಅವರ ಮನೆಯನ್ನು ಶೋಧಿಸಿದರೆ ಕನಿಷ್ಠ 1000 ಕೋಟಿ ರೂ. ದೊರೆಯಲಿದೆ ಎಂದು ಹೇಳಿದರು.
ಪಾಟೀಲ್ ಅವರು 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅವರ ಪರ ಪ್ರಚಾರ ಮಾಡಲು ನಾನಿಲ್ಲದಿದ್ದರೆ ಅವರು ಸೋಲುತ್ತಿದ್ದರು. ಚುನಾವಣೆಯಲ್ಲಿ ಗೆದ್ದ ನಂತರ ನಮ್ಮ ಕೈಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ, ಬಿಜೆಪಿ ಅವರನ್ನು ಆಪರೇಷನ್ ಕಮಲದಲ್ಲಿ ಖರೀದಿ ಮಾಡಿತು. ಬೊಕ್ಕಸ ಲೂಟಿ ಮಾಡುವುದೊಂದೇ ಬಿಜೆಪಿ ಸರ್ಕಾರದ ಸಾಧನೆ ಎಂದು ಕಿಡಿಕಾರಿದರು.
Advertisement