social_icon

ಮಾ.20ಕ್ಕೆ ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶ; ಭಾರತ ಜೋಡೋ ಯಾತ್ರೆ ಬಳಿಕ ರಾಹುಲ್ ಮೊದಲ ಸಾರ್ವಜನಿಕ ಕಾರ್ಯಕ್ರಮ  

ಭಾರತ್ ಜೋಡೋ ಯಾತ್ರೆ ಸುದೀರ್ಘ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೊದಲ ಬಾರಿಗೆ ಬೆಳಗಾವಿಯ ಯುವ ಕ್ರಾಂತಿ ರ್ಯಾಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

Published: 17th March 2023 11:28 AM  |   Last Updated: 17th March 2023 12:08 PM   |  A+A-


Rahul gandhi

ರಾಹುಲ್ ಗಾಂಧಿ

Posted By : Manjula VN
Source : The New Indian Express

ಬೆಳಗಾವಿ: ಭಾರತ್ ಜೋಡೋ ಯಾತ್ರೆ ಸುದೀರ್ಘ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮೊದಲ ಬಾರಿಗೆ ಬೆಳಗಾವಿಯ ಯುವ ಕ್ರಾಂತಿ ರ್ಯಾಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಿಕೆ. ಶಿವಕುಮಾರ್ ಅವರು, ಮಹಾತ್ಮ ಗಾಂಧಿ ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದ 1924ರ ಕಾಂಗ್ರೆಸ್‌ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಹೀಗಾಗಿ, ಇದೇ ಸ್ಥಳದಿಂದ ‘ಯುವ ಕ್ರಾಂತಿ’ ರ್‍ಯಾಲಿ ಆರಂಭಿಸಲು ರಾಹುಲ್‌ ಗಾಂಧಿ ನಿರ್ಧರಿಸಿದ್ದಾರೆಂದು ಹೇಳಿದರು.

“ಬೆಳಗಾವಿ ರ್ಯಾಲಿಯಲ್ಲಿ ರಾಹುಲ್ ಅವರು ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಭಾರತ್ ಜೋಡೋ ಯಾತ್ರೆಯ ಉದ್ದೇಶಗಳು ಮತ್ತು ಗುರಿಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಇದು ಪಕ್ಷದ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಮತ್ತು ಶಕ್ತಿಯನ್ನು ತುಂಬಲು ಮತ್ತು ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಯತ್ನವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮಾರ್ಚ್ 20 ರಂದು ಬೆಳಗಾವಿಗೆ ರಾಹುಲ್ ಗಾಂಧಿ ಭೇಟಿ

ಬಳಿಕ ಕರ್ನಾಟಕದ 865 ಗ್ರಾಮಗಳಲ್ಲಿ ಆರೋಗ್ಯ ಯೋಜನೆ ಜಾರಿಗೆ ತರಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಡಿಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರ ಸರ್ಕಾರ 356ನೇ ವಿಧಿಯನ್ನು ಉಲ್ಲಂಘಿಸಿರುವುದರಿಂದ ಸರ್ಕಾರವನ್ನು ಅಮಾನತುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

"ಎಲ್ಲಾ ರಾಜ್ಯಗಳು ಫೆಡರಲ್ ರಚನೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಮಹಾರಾಷ್ಟ್ರದ ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾನಿ ಮಾಡುತ್ತಿದೆ. ರಾಜ್ಯದ ಶಾಂತಿ ಮತ್ತು ಸಮಗ್ರತೆಗೆ ಧಕ್ಕೆ ತರುವ ಸಂಚು ರೂಪಿಸಲಾಗುತ್ತಿದ್ದು, ಇದು ದುರದೃಷ್ಟಕರ. ಮಹಾರಾಷ್ಟ್ರದ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿರುವ ಕರ್ನಾಟಕ ಸರ್ಕಾರವನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಬೇಕು' ಎಂದು ಒತ್ತಾಯಿಸಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ರಾಜ್ಯ ಭೇಟಿಯಿಂದ ಯಾವುದೇ ಪ್ರಯೋಜನವಿಲ್ಲ: ಸಿಎಂ ಬೊಮ್ಮಾಯಿ

ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಮಾರ್ಚ್ 20 ರಂದು ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ 4-5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಾತನಾಡಿ, ರಾಹುಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಬೆಳಗಾವಿಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಯುವಕರ ಭವಿಷ್ಯದ ಬಗ್ಗೆ ರಾಹುಲ್ ಅವರು ತಮ್ಮ ಭಾಷಣದಲ್ಲಿ ಮಾತನಾಡಲಿದ್ದಾರೆ. ಯುವಕರಿಗೆ ಉದ್ಯೋಗ ಸೃಷ್ಟಿಸಲು ಕಾಂಗ್ರೆಸ್ ಚಿಂತನೆ ಏನೆಂಬುದನ್ನೂ ಘೋಷಿಸಲಿದ್ದಾರೆ ಎಂದು ತಿಳಿಸಿದರು.


Stay up to date on all the latest ರಾಜಕೀಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp