ಸಿದ್ದರಾಮಯ್ಯನವರು ಎಲ್ಲಿ ಬೇಕಾದ್ರೂ ಸ್ಪರ್ಧಿಸಿ ಗೆದ್ದುಬರುವಂತೆ ರಾಹುಲ್ ಗಾಂಧಿ ಹೇಳಿದ್ದಾರೆ: ಡಿ ಕೆ ಶಿವಕುಮಾರ್

ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಗೊಂದಲ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಶ್ರೀ ಆದಿಚುಂಚನಗಿರಿ ಕಾಲಭೈರವೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಉಷಾ ಶಿವಕುಮಾರ್ ಅವರು ಮಂಗಳವಾರ ಪೂಜೆ ಸಲ್ಲಿಸಿದರು
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಶ್ರೀ ಆದಿಚುಂಚನಗಿರಿ ಕಾಲಭೈರವೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಉಷಾ ಶಿವಕುಮಾರ್ ಅವರು ಮಂಗಳವಾರ ಪೂಜೆ ಸಲ್ಲಿಸಿದರು
Updated on

ಬೆಂಗಳೂರು: ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಗೊಂದಲ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯನವರು ಎಲ್ಲಿ ಬೇಕಾದ್ರೂ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಹೇಳಿದ್ದಾರೆ. ಎಲ್ಲಿ ಬೇಕಾದ್ರು ಸ್ಪರ್ಧಿಸಿ ಗೆದ್ದು ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಕೋಲಾರ ನಿಯೋಗಕ್ಕೆ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯನವರ ಸ್ಪರ್ಧೆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ, ಯಾರೂ ಗೊಂದಲಕ್ಕೆ ಒಳಗಾಗಬೇಡಿ ಎಂದು ಇಂದು ಬೆಂಗಳೂರಿಗೆ ಬಂದ ಕೋಲಾರ ನಿಯೋಗಕ್ಕೆ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com