ಡಿಕೆಶಿ ಕಟ್ಟಿ ಹಾಕಲು ಸಿದ್ದರಾಮಯ್ಯರಿಂದ ದತ್ತ ಆಡಿಯೋ ರಿಲೀಸ್! ಬಿಜೆಪಿ ಬಾಂಬ್ 

ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಡುವಣ ಆರೋಪ,ಪ್ರತ್ಯಾರೋಪ, ಟೀಕೆಗಳು ತಾರಕಕ್ಕೇರಿದೆ.
ವೈಎಸ್ ವಿ ದತ್ತ
ವೈಎಸ್ ವಿ ದತ್ತ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಡುವಣ ಆರೋಪ,ಪ್ರತ್ಯಾರೋಪ, ಟೀಕೆಗಳು ತಾರಕಕ್ಕೇರಿದೆ.

ಈ ಮಧ್ಯೆ ಇತ್ತೀಚಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ವೈಎಸ್ ದತ್ತ ಅವರದು ಎನ್ನಲಾದ ಆಡಿಯೋವೊಂದು ರಿಲೀಸ್ ಆಗಿದೆ.ಇದರಲ್ಲಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿರುವ ವೈಎಸ್ ವಿ ದತ್ತ, ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. 

ಈ ಆಡಿಯೋ ಕುರಿತು ವಾಹಿನಿಯೊಂದರ ವರದಿಯನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಬಿಜೆಪಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಕಟ್ಟಿಹಾಕಲು ವಿಪಕ್ಷ ನಾಯಕ ಸಿದ್ದರಾಮಯ್ಯ ದತ್ತ ಅವರ ಆಡಿಯೋ ರಿಲೀಸ್ ಮಾಡಿಸಿದ್ದಾರೆ ಎಂದು ತಿಳಿದುಬಂದಿರುವುದಾಗಿ ಹೇಳಿದೆ.

ಸಿದ್ದರಾಮಯ್ಯ ಅವರನ್ನು ಕ್ಷೇತ್ರವಿಲ್ಲದೆ ಅನಾಥರಾಗಿಸುವಲ್ಲಿ ಡಿಕೆ ಶಿವಕುಮಾರ್ ಸಫಲರಾಗಿದ್ದಾರೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಈ ಆಡಿಯೋ ರಿಲೀಸ್ ಮಾಡಿಸಿದ್ದಾರೆ. ಅದೇನೆ ಇರಲಿ, ಕಾಂಗ್ರೆಸ್ ಮನೆಯೊಂದು ಮೂವತ್ತು ಬಾಗಿಲು! ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com