ಪಕ್ಷ ಸೇರುವಂತೆ ಬಿಜೆಪಿ ಶಾಸಕರಿಗೆ ಡಿಕೆಶಿ ಕರೆ, ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಸವರಾಜ ಬೊಮ್ಮಾಯಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹತಾಶೆಯಿಂದ ಬಿಜೆಪಿಯ ಎಲ್ಲ ಶಾಸಕರಿಗೆ ದೂರವಾಣಿ ಕರೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹತಾಶೆಯಿಂದ ಬಿಜೆಪಿಯ ಎಲ್ಲ ಶಾಸಕರಿಗೆ ದೂರವಾಣಿ ಕರೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಎರಡ್ಮೂರು ದಿನಗಳಿಂದ ಡಿಕೆ ಶಿವಕುಮಾರ್ ಅವರು ನಮ್ಮ ಶಾಸಕರಿಗೆ ಫೋನ್ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರೆ ಕಾಂಗ್ರೆಸ್ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ದೂರಿದರು.

ಮುಂಬರುವ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿಗಳಿಲ್ಲದ ಕಾರಣ, ಶಿವಕುಮಾರ್ ಚುನಾವಣೆಗೆ ಮುನ್ನ ಹತಾಶರಾಗಿದ್ದಾರೆ. ಅವರು ಬಿಜೆಪಿ ಶಾಸಕರನ್ನು ಸಂಪರ್ಕಿಸುತ್ತಿರುವ ರೀತಿಯನ್ನು ಗಮನಿಸಿದರೆ ಕಾಂಗ್ರೆಸ್ ಸಂಪೂರ್ಣ ನಾಶವಾಗಿದೆ ಎಂಬುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು. 

ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com