ಕೂಡ್ಲಿಗಿ ಹಿರಿಯ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜಿನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಆರು ಬಾರಿ ಶಾಸಕರಾಗಿದ್ದ ಕೂಡ್ಲಗಿಯ ಬಿಜೆಪಿ ಹಿರಿಯ ಶಾಸಕ ಎನ್.ವೈ.ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಿನಾಮೆ ಸಲ್ಲಿಸಿದ ಶಾಸಕ ಗೋಪಾಲ ಕೃಷ್ಣ
ರಾಜಿನಾಮೆ ಸಲ್ಲಿಸಿದ ಶಾಸಕ ಗೋಪಾಲ ಕೃಷ್ಣ

ಶಿರಸಿ: ಆರು ಬಾರಿ ಶಾಸಕರಾಗಿದ್ದ ಕೂಡ್ಲಗಿಯ ಬಿಜೆಪಿ ಹಿರಿಯ ಶಾಸಕ ಎನ್.ವೈ.ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ನಿಂದ ಕಾಂಗ್ರೆಸ್ ನಿಂದ ನಾಲ್ಕು ಸಲ ಮೊಳಕಾಲ್ಮೂರು, ಒಂದು ಸಲ ಬಳ್ಳಾರಿ ಗ್ರಾಮೀಣ, 2018ರಲ್ಲಿ ಬಿಜೆಪಿಯಿಂದ ಕೂಡ್ಲಿಗಿ ಶಾಸಕರಾಗಿ ಕಾರ್ಯ ಮಾಡಿದ್ದರು‌. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶುಕ್ರವಾರ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.

ಧರಂ ಸಿಂಗ್‌ ರ ಅವಧಿಯಲ್ಲಿ ಉಪ ಸಭಾಪತಿಗಳಾಗಿ, ಸಿದ್ದರಾಮಯ್ಯ ಅವರ ಅವಧಿಯಲ್ಲಿ ನಂಜುಂಡಪ್ಪ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಕಾರ್ಯ ಮಾಡಿದ್ದರು. ಬಿಜೆಪಿಗೆ ರಾಜಿನಾಮೆ ನೀಡಿರುವ ಗೋಪಾಲಕೃಷ್ಣ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದರು. ಗೋಪಾಲಕೃಷ್ಣ ನಾಲ್ಕು ಬಾರಿ ಶಾಸಕರಾಗಿ ಹೊರಹೊಮ್ಮಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಸೇರ್ಪಡೆ ಆಗಿ, ಟಿಕೆಟ್ ಪಡೆದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com